×
Ad

ದರ್ಶನ್ ಬಳಿಯಿರುವ ಗನ್ ಲೈಸೆನ್ಸ್ ರದ್ದುಗೊಳಿಸಲು ನೋಟಿಸ್

Update: 2025-01-12 19:39 IST

ದರ್ಶನ್

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಬಳಿಯಿರುವ ಗನ್ ಲೈಸೆನ್ಸ್ ರದ್ದುಗೊಳಿಸುವ ಸಂಬಂಧ ಪೊಲೀಸ್ ಇಲಾಖೆ ನೋಟಿಸ್ ಜಾರಿಗೊಳಿಸಿದೆ.

ಬೆಂಗಳೂರು ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ಪದ್ಮಿನಿ ಸಾಹೂ ನೋಟಿಸ್ ನೀಡಿದ್ದು, ಗನ್ ಲೈಸೆನ್ಸ್ ಬಗ್ಗೆ ಒಂದು ವಾರದಲ್ಲಿ ಸ್ಪಷ್ಟನೆ ನೀಡುವಂತೆ ಉಲ್ಲೇಖಿಸಿದ್ದಾರೆ.

ಹತ್ಯೆ ಪ್ರಕರಣದ ಆರೋಪಿಯಾಗಿರುವ ನೀವು ಜಾಮೀನಿನ ಮೇಲೆ ಹೊರಗಿರುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಹಿನ್ನೆಲೆ ನಿಮ್ಮ ಬಳಿಯಿರುವ ಲೈಸೆನ್ಸ್ ಹೊಂದಿರುವ ಗನ್ ಬಳಸಿ ಸಾಕ್ಷಿಗಳನ್ನು ಬೆದರಿಸುವ ಬಗ್ಗೆ ಅನುಮಾನಗಳಿವೆ. ಹಾಗಾಗಿ, ನಿಮ್ಮ ಗನ್ ಲೈಸೆನ್ಸ್ ರದ್ದು ಮಾಡಬೇಕಿದೆ. ಆದ್ದರಿಂದ ಈ ಬಗ್ಗೆ ಒಂದು ವಾರದೊಳಗೆ ಉತ್ತರ ನೀಡುವಂತೆ ಉಲ್ಲೇಖಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News