×
Ad

ʼದ್ವೇಷ ಭಾಷಣ ಮಸೂದೆʼ ಜನರ ಬಾಯಿ ಮುಚ್ಚಿಸೋ ಆದೇಶ : ಪ್ರಹ್ಲಾದ್‌ ಜೋಶಿ ಆಕ್ರೋಶ

"ರಾಜ್ಯ ಸರಕಾರ ಈ ಮಸೂದೆ ಮೂಲಕ ವಾಕ್ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಿದೆ"

Update: 2025-12-20 13:38 IST

 ಪ್ರಹ್ಲಾದ್‌ ಜೋಶಿ

ಹೊಸದಿಲ್ಲಿ : ಕರ್ನಾಟಕ ಕಾಂಗ್ರೆಸ್ ಸರಕಾರ ಅಂಗೀಕರಿಸಿದ ʼದ್ವೇಷ ಭಾಷಣ ಮಸೂದೆʼ ಸಾರ್ವಜನಿಕರ ಬಾಯಿ ಮುಚ್ಚಿಸುವ ಆದೇಶವಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದ್ದಾರೆ.

ರಾಜ್ಯ ಸರಕಾರ ಈ ಮಸೂದೆ ಮೂಲಕ ಸಂವಿಧಾನದ 19ನೇ ವಿಧಿಯ ವಾಕ್ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಿದೆ. ಈ ಸರಕಾರದ ಇಂತಹ ನೀತಿಗಳಿಂದಾಗಿ ಪ್ರತಿಕೂಲ ಪರಿಸ್ಥಿತಿಗಳಲ್ಲಿ ಪ್ರಜಾಪ್ರಭುತ್ವ ಉಳಿಯಲು ಸಾಧ್ಯವಿಲ್ಲದಂತಾಗಿದೆ ಎಂದು ಸರಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಬ್ರಿಟಿಷ್ ಕಾಲದ ವಸಾಹತು ಶಾಹಿಗಳ ಅಸ್ಪಷ್ಟ ವ್ಯಾಖ್ಯಾನಗಳು, ವ್ಯಾಪಕ ಅಧಿಕಾರದ ದಾಹ ಮತ್ತು ಕಠಿಣ ಕ್ರಿಮಿನಲ್ ಶಿಕ್ಷೆ ಮೂಲಕ ಜನಪರ ಹೋರಾಟವನ್ನು ಹತ್ತಿಕ್ಕಲು ನೋಡಿದೆ. ಈ ಸರಕಾರ ದಬ್ಬಾಳಿಕೆಗಾಗಿ ಇಂತಹ ಕಾನೂನುಗಳನ್ನು ಬಳಸಿಕೊಳ್ಳಲು ನೋಡುತ್ತಿದೆ. ಸಂವಿಧಾನದ ನಿಬಂಧನೆಗಳನ್ನು ಕಿಂಚಿತ್ತೂ ಗೌರವಿಸದೆ ಆಡಳಿತ ನಡೆಸುತ್ತಿದೆ ಎಂದು ಸಚಿವ ಜೋಶಿ ಆಕ್ರೋಶ ಹೊರಹಾಕಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News