×
Ad

ಬಂಗ್ಲೆಗುಡ್ಡದಲ್ಲಿ ಅಸ್ಥಿಪಂಜರಗಳ ರಾಶಿಯೇ ಕಂಡಿದೆ ಎಂಬ ವಿಠಲ್ ಗೌಡರ ಹೇಳಿಕೆ ಬಗ್ಗೆ ಬಿಜೆಪಿ ಮೌನವೇಕೆ? : ಪ್ರಿಯಾಂಕ್‌ ಖರ್ಗೆ

Update: 2025-09-13 16:30 IST

ಪ್ರಿಯಾಂಕ್‌ ಖರ್ಗೆ

ಬೆಂಗಳೂರು : "ಧರ್ಮಸ್ಥಳ ಚಲೋ ಮಾಡಿದ್ದ ಬಿಜೆಪಿಯವರು ಧರ್ಮಸ್ಥಳವನ್ನು ಮರೆತು ಮದ್ದೂರು ಚಲೋ ಮಾಡುತ್ತಿದ್ದಾರೆ, ಬಿಜೆಪಿ ನಾಯಕರು ಧರ್ಮಸ್ಥಳದ ಬಗ್ಗೆ ಏಕಾಏಕಿ ಮೌನಕ್ಕೆ ಜಾರಿರುವುದು ಏಕೆ?" ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಟ್ವೀಟ್‌ ಮಾಡಿರುವ ಅವರು, ʼಬಿಜೆಪಿಯವರ ಧರ್ಮರಕ್ಷಣೆಯ ನಾಟಕವು ನಾಲ್ಕು ದಿನದ ಪ್ರದರ್ಶನಕ್ಕೆ ಮಾತ್ರ ಸೀಮಿತವೇ? ಸೌಜನ್ಯ ಸಂಬಂಧಿ ವಿಠಲ್ ಗೌಡರವರು ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ ಅಸ್ಥಿಪಂಜರಗಳ ರಾಶಿಯೇ ಕಂಡಿದೆ ಎಂಬ ಅಘಾತಕಾರಿ ವಿಷಯಗಳನ್ನು ಬಹಿರಂಗಪಡಿಸಿದ್ದಾರೆ. ಆ ಸ್ಥಳವು ಅಕ್ಷರಶಃ ಯುದ್ಧಕಣದಂತೆ ಭಾಸವಾಗುತ್ತದೆ ಎಂದು ವರದಿಗಳು ಹೇಳುತ್ತವೆ ಎಂದು ಉಲ್ಲೇಖಿಸಿದ್ದಾರೆ.

ಸೌಜನ್ಯರ ಮನೆಗೆ ಭೇಟಿ ನೀಡಿದ್ದ ಬಿಜೆಪಿಯವರು ಆ ಕುಟುಂಬದವರ ಹೇಳಿಕೆಯ ಬಗ್ಗೆ ಏನು ಹೇಳುತ್ತಾರೆ? ವಿಠಲ್ ಗೌಡರ ಹೇಳಿಕೆಯ ಬಗ್ಗೆ ಬಿಜೆಪಿಯವರ ಮೌನವೇಕೆ? ಬಿಜೆಪಿ ನಾಯಕರು ತಾವು ಸೌಜನ್ಯ ಕುಟುಂಬದವರ ಪರವೋ ಅಥವಾ ಅವರು ಆರೋಪಿಸುತ್ತಿರುವವರ ಪರವೋ ಎಂಬುದನ್ನು ಸ್ಪಷ್ಟಪಡಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News