×
Ad

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬಳ್ಳಾರಿ ಜೈಲಿನಲ್ಲಿರುವ ಓರ್ವ ಎನ್ಐಎ ವಶಕ್ಕೆ

Update: 2024-03-08 10:33 IST

ಬೆಂಗಳೂರು, ಮಾ.8: ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಬಳ್ಳಾರಿ ಜೈಲಿನಲ್ಲಿರುವ ಓರ್ವನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)ದ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆಗೊಳಪಡಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಈಗಾಗಲೇ ಬಂಧಿತನಾಗಿ ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲಿರುವ ಬಳ್ಳಾರಿ ಮೂಲದ ಸುಲೇಮಾನ್ ಎಂಬಾತನನ್ನು ಎನ್ಐಎ ಅಧಿಕಾರಿಗಳು ಬಾಡಿ ವಾರಂಟ್ ಮೂಲಕ ತಮ್ಮ ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ನಿಷೇಧಿತ ಪಿಎಫ್ಐ ಸಂಘಟನೆಯ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಈತನನ್ನು 2023ರ ಡಿಸೆಂಬರ್ 18ರಂದು ಎನ್ ಐಎ ಅಧಿಕಾರಿಗಳು ಬಂಧಿಸಿದ್ದರು. ಇದೀಗ ಬೆಂಗಳೂರು ರಾಮೇಶ್ವರಿ ಕೆಫೆ ಬಾಂಬ್ ಸ್ಫೋಟದ ಸಂಚಿನಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಸುಲೇಮಾನ್ ನನ್ನು ಎನ್ ಐಎ ವಶಕ್ಕೆ ಪಡೆದಿದೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News