×
Ad

ರಾಣೇಬೆನ್ನೂರು | ಕಾರು ಮರಕ್ಕೆ ಢಿಕ್ಕಿ: ಮಹಿಳೆ ಸಹಿತ ಇಬ್ಬರು ಮೃತ್ಯು

Update: 2023-07-19 10:21 IST

ಹಾವೇರಿ, ಜು.19: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಹಿತ ಇಬ್ಬರು ಮೃತಪಟ್ಟ ಘಟನೆ ರಾಣೇಬೆನ್ನೂರು ಬಳಿ ನಡೆದಿರುವುದು ವರದಿಯಾಗಿದೆ.

ಮೃತರನ್ನು ಶಿರಸಿ ತಾಲೂಕಿನ ಹುಲೆಕಲ್ ಗ್ರಾಮದ ನಿವಾಸಿಗಳಾದ ವಿಠ್ಠಲ್ (47) ಹಾಗೂ ಜಯಂತಿ (50) ಎಂದು ಗುರುತಿಸಲಾಗಿದೆ. ಇವರು ಮಂಗಳವಾರ ಸಂಜೆ ಬೆಂಗಳೂರಿನಿಂದ ಶಿರಸಿಗೆ ವಾಪಸ್ಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಜಯಂತಿಯವರ ಪುತ್ರಿ ದುಬೈಗೆ ಹೊರಟಿದ್ದು, ಅವರನ್ನು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಿಟ್ಟು ಕಾರಿನಲ್ಲಿ ವಾಪಸ್ ಊರಿನತ್ತ ಹೊರಟಿದ್ದರು. ವಿಠ್ಠಲ್ ಕಾರು ಚಲಾಯಿಸುತ್ತಿದ್ದರು. ಸಂಜೆ 6 ಗಂಟೆ ಸುಮಾರಿಗೆ ಇವರು ಸಂಚರಿಸುತ್ತಿದ್ದ ಕಾರು ರಾಣೇಬೆನ್ನೂರು ಬಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿದ್ದ ದೊಡ್ಡ ಹುಣಸೆ ಮರವೊಂದಕ್ಕೆ ಢಿಕ್ಕಿ ಹೊಡೆದಿದೆ. ಇದರಿಂದ ಗಂಭೀರ ಗಾಯಗೊಂಡ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News