×
Ad

ಮಹಾರಾಷ್ಟ್ರದಲ್ಲಿ ಮೀಸಲಾತಿ ಹೋರಾಟ: KSRTC ಬಸ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

Update: 2023-10-30 22:54 IST

ಕಲಬುರಗಿ,ಅ.30; ಮಹಾರಾಷ್ಟ್ರದಲ್ಲಿ ಮೀಸಲಾತಿ ಸಂಬಂಧ ಹೋರಾಟ ನಡೆಯುತ್ತಿದ್ದು, ಸೋಮವಾರ ಕಾರ್ಯಚರಣೆಯಲ್ಲಿದ್ದ ಕರ್ನಾಟಕಕ್ಕೆ ಸೇರಿದ ಕೆಕೆಆರ್‌ಟಿಸಿ (ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ) ಬಸ್ಸಿಗೆ ಬೆಂಕಿ ಹಚ್ಚಿದ ಪರಿಣಾಮ ಅಂತರ್ ರಾಜ್ಯ ಬಸ್ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕೆ.ಕೆ.ಆರ್.ಟಿ.ಸಿ ವ್ಯವಸ್ಥಾಪಕ ಎಂ.ರಾಚಪ್ಪ ತಿಳಿಸಿದ್ದಾರೆ

ಸೋಮವಾರ ಬೀದರ ಜಿಲ್ಲೆಯ ಭಾಲ್ಕಿಯಿಂದ ಪುಣೆಗೆ ಹೊರಟಿದ್ದ ಬಸ್ ಸಂಖ್ಯೆ ಕೆ.ಎ-38 ಎಫ್-1201 ಬಸ್ ಮಹಾರಾಷ್ಟ್ರದ ಉಮರ್ಗಾ ಬಳಿಯ ತರುರಿ ಗ್ರಾಮದಲ್ಲಿ ಪ್ರತಿಭಟನಾಕಾರರು ಬಸ್ ತಡೆದು ಪ್ರಯಾಣಿಕರನ್ನು ಕೆಳಗಿಳಿಸಿ ಬಸ್ಸಿಗೆ ಬೆಂಕಿ ಹಚ್ಚಿದ್ದಾರೆ. ಈ ಹಿನ್ನೆಲೆಯಲ್ಲಿ ತುಳಜಾಪುರ ಯಾತ್ರೆ ಸೇರಿದಂತೆ ಮಹಾರಾಷ್ಟ್ರಕ್ಕೆ ಅಂತರಾಜ್ಯ ಕಾರ್ಯಾಚರಣೆಯನ್ನು ತಾತ್ಕಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಸ್ಥಳೀಯ ಪೊಲೀಸರ ನೆರವಿನಿಂದ ಬಸ್ ನಲ್ಲಿದ್ದ 39 ಪ್ರಯಾಣಿಕರನ್ನು ಸುರಕ್ಷಿತವಾಗಿ ಅವರ ತಲುಪುವ ಸ್ಥಳಕ್ಕೆ ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಇನ್ನೂ ಮಹಾರಾಷ್ಟ್ರದಲ್ಲಿ ಕಾರ್ಯಚರಣೆಯಲ್ಲಿರುವ ಬಸ್ ಗಳನ್ನು ಹತ್ತಿರ ಪೊಲೀಸ್ ಠಾಣೆ, ಬಸ್ ಡೀಪೋ ಗಳಲ್ಲಿ ನಿಲುಗಡೆ ಮಾಡಲು ಸಂಸ್ಥೆ ಸಿಬ್ಬಂದಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News