×
Ad

ಮಡಿಕೇರಿಯಲ್ಲಿ ರಸ್ತೆ ಅಪಘಾತ: ಉಡುಪಿ ಮೂಲದ ವೈದ್ಯಕೀಯ ವಿದ್ಯಾರ್ಥಿ ಮೃತ್ಯು

Update: 2023-09-20 21:17 IST

ಮಡಿಕೇರಿ,ಸೆ.20: ಹಾಲಿನ ಟ್ಯಾಂಕರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮಡಿಕೇರಿಯ ಮೆಡಿಕಲ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ ಮೃತಪಟ್ಟ ಘಟನೆ ಬುಧವಾರ ಕಾಟಕೇರಿ ಬಳಿ ವರದಿಯಾಗಿದೆ.

ಉಡುಪಿ ಮೂಲದ ವಿಜೇಶ್ ಮೃತ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. 

ಬುಧವಾರ ಸಂಜೆ ಉಡುಪಿಯಿಂದ ವಿಜೇಶ್ ಮತ್ತು ಶಿವಾನಂದ್ ಎಂಬವರು ಬೈಕ್‍ನಲ್ಲಿ ಮಡಿಕೇರಿ ಕಡೆಗೆ ಆಗಮಿಸುತ್ತಿದ್ದರು. ಈ ವೇಳೆ ಕಾಟಕೇರಿ ಬಳಿ ಮಡಿಕೇರಿಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಬಹು ಚಕ್ರದ ಹಾಲಿನ ಟ್ಯಾಂಕರ್ ನಡುವೆ ಢಿಕ್ಕಿ ಸಂಭವಿಸಿದೆ. ಪರಿಣಾಮ ಬೈಕ್ ಸವಾರ ವಿಜೇಶ್ ಮೃತಪಟ್ಟಿದ್ದು, ಹಿಂಬದಿ ಸವಾರ ಶಿವಾನಂದ್ ಅವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಡಿಕೇರಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಲಾರಿ ಸಹಿತ ಚಾಲಕನ ವಿರುದ್ದ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News