×
Ad

ಶಿವಮೊಗ್ಗ: ಬೆರಳಚ್ಚಿನಿಂದ ಸಿಕ್ಕಿಬಿದ್ದ ದರೋಡೆ ಪ್ರಕರಣದ ಆರೋಪಿ

Update: 2023-07-19 18:12 IST
ಬಂಧಿತ ಆರೋಪಿ

ಶಿವಮೊಗ್ಗ, ಜು.19: ರಾತ್ರಿ ಗಸ್ತು ವೇಳೆ ಅನುಮಾನಾಸ್ಪದ ವ್ಯಕ್ತಿಯೊಬ್ಬನ ಬೆರಳಚ್ಚು ಪಡೆದು ಪೊಲೀಸರು ಪರಿಶೀಲನೆ ನಡೆಸಿದಾಗ ಅಪರಾಧ ಹಿನ್ನೆಲೆ ಪತ್ತೆಯಾಗಿದೆ. ಕೂಲಂಕಷವಾಗಿ ಪರಿಶೀಲಿಸಿದಾಗ ಈತ ಪ್ರಕರಣವೊಂದರ ಸಂಬಂಧ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿರುವುದು ಗೊತ್ತಾಗಿದೆ.

ದರೋಡೆ ಪ್ರಕರಣದ ಆರೋಪಿ ನವೀನ್ ನಾಯ್ಕ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 

ದೊಡ್ಡಪೇಟೆ ಠಾಣೆ ಸಿಬ್ಬಂದಿ ಗಂಗಪ್ಪ ತುಂಗಲ್ ಅವರು ರಾತ್ರಿ ಗಸ್ತು ನಡೆಸುತ್ತಿದ್ದರು. ಈ ವೇಳೆ ಅನುಮಾನಾಸ್ಪದ ವ್ಯಕ್ತಿಗಳ ವಿಚಾರಣೆ ನಡೆಸುತ್ತಿದ್ದರು. ಮೊಬೈಲ್ ಕ್ರೈಮ್ ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್‌ವರ್ಕ್ ಸಿಸ್ಟಮ್ ತಂತ್ರಾಂಶದ ಮೂಲಕ ಅನುಮಾನಾಸ್ಪದ ವ್ಯಕ್ತಿಗಳ ಫಿಂಗರ್ ಪ್ರಿಂಟ್ ಸ್ಕ್ಯಾನ್ ಮಾಡಲಾಯಿತು. ಈ ವೇಳೆ ನವೀನ್ ನಾಯ್ಕನಿಗೆ ಅಪರಾಧ ಹಿನ್ನಲೆ ಇರುವುದು ಗೊತ್ತಾಗಿದೆ.

ವಿಚಾರಣೆ ನಡೆಸಿದಾಗ ದರೋಡೆ ಪ್ರಕರಣವೊಂದರಲ್ಲಿ ನವೀನ್ ನಾಯ್ಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಅನ್ನುವುದು ತಿಳಿದು ಬಂದಿದೆ. ಅಲ್ಲದೆ ಆತನ ವಿರುದ್ಧ ವಾರಂಟ್ ಕೂಡ ಜಾರಿಯಾಗಿತ್ತು. ಕೂಡಲೆ ಆತನನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿ,ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News