×
Ad

ಶಿವಮೊಗ್ಗ: ಹಲ್ಲೆ ಪ್ರಕರಣ; ಇಬ್ಬರ ಬಂಧನ

Update: 2023-06-26 09:20 IST

ಶಿವಮೊಗ್ಗ: ಕ್ಷುಲಕ ವಿಚಾರಕ್ಕೆ ಎರಡು ಗುಂಪುಗಳ ಯುವಕರ ಮಧ್ಯೆ ಗಲಾಟೆಯಾಗಿ ಇಬ್ಬರು ಗಾಯಗೊಂಡ ಘಟನೆ ತುಂಗಾ ನಗರ ಠಾಣೆ ವ್ಯಾಪ್ತಿಯ ಟಿಪ್ಪು ನಗರದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಬೈಕ್ ಮತ್ತು ಆಟೋ ತಾಗಿದ ವಿಚಾರಕ್ಕೆ ಗಲಾಟೆಯಾಗಿ ಇಬ್ಬರು ಗಾಯಗೊಂಡಿದ್ದಾರೆ. ಘಟನೆ ಕೋಮು ಸ್ವರೂಪ ಪಡೆದಿತ್ತು. ಸಂದೇಶ್ ಎಂಬಾತನ ಕಣ್ಣಿನ ಬಳಿ ಗಾಯವಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ದ್ರೌಪದಮ್ಮ ಸರ್ಕಲ್ ಬಳಿ ವಿಜಯ್ ಕುಮಾರ್ ಎಂಬಾತನ ಮೇಲೆ ಭಾನುವಾರ ಸಂಜೆ ಹಲ್ಲೆಯಾಗಿದೆ ಎನ್ನಲಾಗಿದ್ದು, ಗುರುಸಿದ್ದಪ್ಪ ಮತ್ತು ತಸ್ರು ಎಂಬುವವರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ವಿಜಯ್ ಕುಮಾರ್ ಬೆನ್ನು ಮತ್ತು ಬಲಗೈ ಗೆ ಚೂಪಾದ ಆಯುಧದಿಂದ ಹಲ್ಲೆಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಯಾವ ಆಯುಧ ಎಂಬುದರ ಕುರಿತು ಪರಿಶೀಲನೆ ನಡೆಯುತ್ತಿದೆ. ಇದು ವೈಯಕ್ತಿಕ ಪ್ರಕರಣವಾಗಿದ್ದು ತನಿಖೆ ಬಳಿಕ ಪ್ರಕರಣ ದಾಖಲು ಮಾಡಲಾಗುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಟಿಪ್ಪು ನಗರದಲ್ಲಿ ನಡೆದ ಹಲ್ಲೆ ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News