×
Ad

ಭೂ ಪರಿವರ್ತನೆ ನಿಯಮಗಳ ಸರಳೀಕರಣ: ಸಚಿವ ಕೃಷ್ಣ ಬೈರೇಗೌಡ

Update: 2025-12-10 19:43 IST

ಬೆಳಗಾವಿ(ಸುವರ್ಣವಿಧಾನಸೌಧ): ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪ-ಕಲಂಗಳಿಗೆ ತಿದ್ದುಪಡಿಯನ್ನು ಮಾಡಲಾಗಿದೆ. ಅದನ್ನು ಜಾರಿಗೆ ತರಲು ಈಗಾಗಲೇ ವಿವಿಧ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿ, ಅಭಿಪ್ರಾಯ ಹಾಗೂ ಸಲಹೆಯನ್ನು ಪಡೆದು ಸೂಕ್ತ ನಿಯಮಗಳನ್ನು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಬುಧವಾರ ವಿಧಾನ ಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ರಾಮೋಜಿ ಗೌಡರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರಸ್ತುತ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸಲು ಕ್ರಮವಹಿಸಲಾಗುತ್ತಿರುವುದರಿಂದ ಜನತೆಗೆ ತೊಂದರೆಯಾಗುತ್ತಿರುವುದು ಸರಕಾರದ ಗಮನಕ್ಕೆ ಬಂದಿರುವುದಿಲ್ಲ ಎಂದರು.

ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ಕ್ಕೆ ಮಾಡಲಾದ ತಿದ್ದುಪಡಿಗಳಿಗೆ ಅನುಗುಣವಾಗಿ ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ವಿವಿಧ ನಿಯಮಗಳಿಗೆ ತಿದ್ದುಪಡಿ ಮಾಡಲು ಸರಕಾರವು ದಿನಾಂಕ: 17.09.2025ರಂದು ಕರಡು ನಿಯಮಗಳ ಅಧಿಸೂಚನೆಯನ್ನು ಹೊರಡಿಸಿದ್ದು, ಶೀಘ್ರದಲ್ಲಿ ಅಂತಿಮ ಅಧಿಸೂಚನೆಯನ್ನು ಹೊರಡಿಸಲಾಗುವುದು ಎಂದು ಕೃಷ್ಣ ಬೈರೇಗೌಡ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News