×
Ad

ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ : ಸಚಿವ ಶಿವಾನಂದ ಪಾಟೀಲ್

Update: 2025-01-24 18:35 IST

 ಶಿವಾನಂದ ಎಸ್.ಪಾಟೀಲ್

ಬೆಂಗಳೂರು : ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಖರೀದಿ ಮಾಡಲು ಒಂದು ವಾರದೊಳಗೆ ನೋಂದಣಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್.ಪಾಟೀಲ್ ತಿಳಿಸಿದ್ದಾರೆ.

ಶುಕ್ರವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ರಾಜ್ಯ ಸರಕಾರದ ಮನವಿ ಮೇರೆಗೆ ಕೇಂದ್ರ ಸರಕಾರ ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿಗೆ ಅನುಮತಿ ನೀಡಿದ್ದು, ಕ್ವಿಂಟಲ್‍ಗೆ 5,650ರೂ. ಗಳಂತೆ ಖರೀದಿ ಮಾಡಲಾಗುವುದು. ನೋಂದಣಿಗೆ 80 ದಿನ ಹಾಗೂ ಖರೀದಿಗೆ 90 ದಿನ ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರಕಾರ ನಾಫೆಡ್ ಮತ್ತು ಎನ್‍ಸಿಸಿಎಫ್ ಸಂಸ್ಥೆಗಳನ್ನು ಹಾಗೂ ರಾಜ್ಯ ಸರಕಾರ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳಿ ಮತ್ತು ಕಲಬುರಗಿಯ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯನ್ನು ಖರೀದಿ ಸಂಸ್ಥೆಗಳನ್ನಾಗಿ ನೇಮಕ ಮಾಡಿ ಕಡಲೆಕಾಳು ಖರೀದಿ ಮಾಡಬೇಕಾದ ಜಿಲ್ಲೆಗಳನ್ನು ಹಂಚಿಕೆ ಮಾಡಲಾಗಿದೆ. ರೈತರು ತಮ್ಮ ಸಮೀಪದ ಟಿಎಪಿಸಿಎಂಎಸ್, ಎಫ್‍ಪಿಒ ಹಾಗೂ ಪಿಎಸಿಎಸ್‍ಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದಿದ್ದಾರೆ.

ಧಾರವಾಡ, ಗದಗ, ಬೆಳಗಾವಿ, ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಬಾಗಲಕೋಟೆ, ದಾವಣಗೆರೆ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಶಿವಾನಂದ ಪಾಟೀಲ್ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News