×
Ad

SSLC : ಗಣಿತ ಪರೀಕ್ಷೆಗೆ 15,306 ವಿದ್ಯಾರ್ಥಿಗಳು ಗೈರು

Update: 2024-04-02 18:24 IST

ಬೆಂಗಳೂರು: ರಾಜ್ಯಾದ್ಯಂತ ಎಸೆಸೆಲ್ಸಿ ಪರೀಕ್ಷೆಯು ನಡೆಯುತ್ತಿದ್ದು, ಮಂಗಳವಾರದಂದು ನಡೆದ ಗಣಿತ ವಿಷಯದ ಪರೀಕ್ಷೆಯಲ್ಲಿ 15,306 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಕಲಬುರಗಿ ಒಂದೇ ಜಿಲ್ಲೆಯಲ್ಲಿ 2,062 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಬೆಂಗಳೂರು ಜಿಲ್ಲೆಯಲ್ಲಿ 1,890, ಬೀದರ್ ಜಿಲ್ಲೆಯಲ್ಲಿ 1,211, ರಾಯಚೂರು ಜಿಲ್ಲೆಯಲ್ಲಿ 1,007, ವಿಜಯಪುರ 926, ಬೆಳಗಾವಿ ಜಿಲ್ಲೆಯಲ್ಲಿ 1,001, ಕೊಪ್ಪಳ ಜಿಲ್ಲೆಯಲ್ಲಿ 603 ವಿದ್ಯಾರ್ಥಿಗಳು ಗೈರಾಗಿದ್ದಾರೆ. ರಾಜ್ಯಾದ್ಯಂತ ಪರೀಕ್ಷೆಗೆ 8,46,306 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 8,31,000 ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News