×
Ad

ರೈಲು ಸೇವೆಗಳ ತಾತ್ಕಾಲಿಕ ರದ್ದತಿಯ ಅವಧಿ ವಿಸ್ತರಣೆ

Update: 2025-10-24 23:33 IST

ಸಾಂದರ್ಭಿಕ ಚಿತ್ರ 

ಬೆಂಗಳೂರು: ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ (ಘಾಟ್ ಸೆಕ್ಷನ್) ನಡುವಿನ ರೈಲ್ವೆ ವಿದ್ಯುದ್ದೀಕರಣ ಕಾರ್ಯವು ನಡೆಯುತ್ತಿರುವ ಕಾರಣ, ನೈಋತ್ಯ ರೈಲ್ವೆಯು ನ.2 ರಿಂದ ಡಿ.15ರವರೆಗೆ ಪ್ರತಿದಿನ ನಾಲ್ಕು ಗಂಟೆಗಳ ಕಾಲ ಲೈನ್ ಬ್ಲಾಕ್ ತೆಗೆದುಕೊಳ್ಳಲಿದೆ. ಈ ಕಾರಣದಿಂದಾಗಿ, ಈ ಕೆಳಗೆ ತಿಳಿಸಲಾದ ಕೆಲವು ರೈಲು ಸೇವೆಗಳ ತಾತ್ಕಾಲಿಕ ರದ್ದತಿಯ ಅವಧಿಯನ್ನು ವಿಸ್ತರಿಸಲಾಗಿದೆ.

ರೈಲು ಸಂಖ್ಯೆ 16539 ಯಶವಂತಪುರ-ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಮೊದಲು ನ.1ರವರೆಗೆ ರದ್ದುಗೊಂಡಿತ್ತು. ಈಗ ನ.8ರಿಂದ 13ರವರೆಗೆ ರದ್ದುಗೊಳ್ಳಲಿದೆ. ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಮೊದಲು ನ.2ರವರೆಗೆ ರದ್ದುಗೊಂಡಿತ್ತು. ಈಗ ನ.9 ರಿಂದ 14ರವರೆಗೆ ರದ್ದುಗೊಳ್ಳಲಿದೆ.

ರೈಲು ಸಂಖ್ಯೆ 16575 ಯಶವಂತಪುರ-ಮಂಗಳೂರು ಜಂಕ್ಷನ್ ಗೋಮಟೇಶ್ವರ ಟ್ರೈ-ವೀಕ್ಲಿ ಎಕ್ಸ್ ಪ್ರೆಸ್ ಮೊದಲು ಅ.30ರವರೆಗೆ ರದ್ದುಗೊಂಡಿತ್ತು. ಈಗ ನ.2 ರಿಂದ 14ರವರೆಗೆ ರದ್ದುಗೊಳ್ಳಲಿದೆ. ರೈಲು ಸಂಖ್ಯೆ 16576 ಮಂಗಳೂರು ಜಂಕ್ಷನ್-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ ಪ್ರೆಸ್ ಮೊದಲು ಅ.30ರವರೆಗೆ ರದ್ದುಗೊಂಡಿತ್ತು. ಈಗ ನ.3 ರಿಂದ ಡಿ.15ರವರೆಗೆ ರದ್ದುಗೊಳ್ಳಲಿದೆ.

ರೈಲು ಸಂಖ್ಯೆ 16515 ಯಶವಂತಪುರ-ಕಾರವಾರ ಟ್ರೈ-ವೀಕ್ಲಿ ಎಕ್ಸ್ ಪ್ರೆಸ್ ಮೊದಲು ಅ.31ರವರೆಗೆ ರದ್ದುಗೊಂಡಿತ್ತು. ಈಗ ನ.3 ರಿಂದ ಡಿ.15ರವರೆಗೆ ರದ್ದುಗೊಳ್ಳಲಿದೆ. ರೈಲು ಸಂಖ್ಯೆ 16516 ಕಾರವಾರ-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ ಪ್ರೆಸ್ ಮೊದಲು ನ.1ರವರೆಗೆ ರದ್ದುಗೊಂಡಿತ್ತು. ಈಗ ನ.4 ರಿಂದ ಡಿ.16ರವರೆಗೆ ರದ್ದುಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News