×
Ad

ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2025-12-09 20:51 IST

ಬೆಂಗಳೂರು: ಮಂಗಳವಾರದಂದು ರಾಜ್ಯ ಸರಕಾರವು ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆಯ ನಿರ್ದೇಶಕರಾದ ಜ್ಯೋತಿ ಕೆ. ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಆಯೋಗದ ಕಾರ್ಯದರ್ಶಿಯಾಗಿದ್ದ(ಪ್ರಭಾರ) ಡಾ.ವಿಶಾಲ್ ಆರ್. ಅವರನ್ನು ಬಿಡುಗಡೆ ಮಾಡಲಾಗಿದೆ.

ಹಣಕಾಸು ಇಲಾಖೆಯ ಸರಕಾರದ ಕಾರ್ಯದರ್ಶಿ ಡಾ.ವಿಶಾಲ್ ಆರ್. ಅವರನ್ನು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಸರಕಾರದ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದ್ದು, ಪ್ರಭಾರಿ ಅಧಿಕಾರಿಯಾಗಿ ಹಣಕಾಸು ಇಲಾಖೆಯ ಸರಕಾರದ ಕಾರ್ಯದರ್ಶಿ ಮತ್ತು ಹಣಕಾಸು ನೀತಿ ಸಂಸ್ಥೆಯ ನಿರ್ದೇಶಕ ಹುದ್ದೆಗಳಿಗೆ ನೇಮಕ ಮಾಡಲಾಗಿದೆ.

ಇನ್ನು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಸರಕಾರದ ಕಾರ್ಯದರ್ಶಿಯಾಗಿದ್ದ ಡಾ.ಮಂಜುಳಾ ಎನ್. ಅವರನ್ನು ಬಿಡುಗಡೆ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News