×
Ad

ತುಂಗಾ ನದಿಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರುಪಾಲು

Update: 2023-09-18 22:20 IST

ಶಿವಮೊಗ್ಗ: ತುಂಗಾ ನದಿಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಶಿವಮೊಗ್ಗ ನಗರದ ಕುರುಬರ ಪಾಳ್ಯ ಬಳಿ ನಡೆದಿದೆ. 

18 ವರ್ಷದ ಫಯಾಝ್ ಅಹ್ಮದ್ ಮತ್ತು 19 ವರ್ಷದ ಅಂಜುಂ ಖಾನ್ ನೀರುಪಾಲಾದ ಯುವಕರಾಗಿದ್ದಾರೆ. ಯುವಕರ ಮೊಬೈಲ್ ಹಾಗೂ ಬಟ್ಟೆಗಳು ನದಿ ದಂಡೆಯ ಮೇಲೆ ಪತ್ತೆಯಾಗಿದೆ.

ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ದೊಡ್ಡಪೇಟೆ ಠಾಣೆ ಪೊಲೀಸರು ಯುವಕರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.‌ 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News