×
Ad

ಕಲಬುರಗಿ: ಲಾರಿ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Update: 2023-12-16 18:28 IST

ಕಲಬುರಗಿ: ಚಿತ್ತಾಪುರ ಪಟ್ಟಣದ ಮಯೂರ್ ಲಾಡ್ಜ್ ಹತ್ತಿರ ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಪಟ್ಟಣದ ಆಶ್ರಯ ಕಾಲೋನಿ ನಿವಾಸಿ ವಿಜಯ ಕುಮಾರ್ ಚಂದ್ರಾಶಾ ಮೌರೇ (33) ಮೃತಪಟ್ಟವರು.

ಗಣೇಶ ನಗರದಿಂದ ಆಶ್ರಯ ಕಾಲೋನಿಗೆ ಹೋಗುವಾಗ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಸಿಪಿಐ ಚಂದ್ರಶೇಖರ ತಿಗಡಿ, ಪಿಎಸ್ಐ ಶ್ರೀಶೈಲ್ ಅಂಬಾಟಿ, ಸಿಬ್ಬಂದಿಗಳಾದ ಹುಸೇನ್ ಪಾಶಾ, ಶಿವಯ್ಯ ಸ್ವಾಮಿ, ಮುಕ್ತುಂ ಪಟೇಲ್, ಅಯ್ಯಣ್ಣ ಅವರು ಭೇಟಿ ನೀಡಿ ಪರಿಶೀಲನೆ ನಡಿಸಿದರು.

ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ್ದು ಪೊಲೀಸ್ ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News