×
Ad

ಉಡುಪಿ : ಮುಂದುವರಿದ ಭಾರೀ ಮಳೆ; ಜಲಾವೃತವಾದ ನಗರ, ನೂರಾರು ಕುಟುಂಬಗಳ ಸ್ಥಳಾಂತರ

Update: 2023-07-06 11:26 IST

ಉಡುಪಿ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಉಡುಪಿ ನಗರದ ಬಹುತೇಕ ಪ್ರದೇಶಗಳು ಜಲಾವೃತಗೊಂಡಿದ್ದು ಹಲವು ಮನೆಗಳಿಗೆ ನೀರು ನುಗ್ಗಿರುವ ಹಿನ್ನೆಲೆಯಲ್ಲಿ ಇಲ್ಲಿನ ನೂರಾರು ಕುಟುಂಬಗಳನ್ನು ಸ್ಥಳಾಂತರಗೊಳಿಸುವ ಕಾರ್ಯ ಮುಂದುವರಿದಿರುವ ಬಗ್ಗೆ ವರದಿಯಾಗಿದೆ.

ನಗರದ ಬೈಲಕೆರೆ ಮೂಡನಿಡಂಬೂರು ಕೊಡವೂರು ನಿಟ್ಟೂರು, ಕಲ್ಸಂಕ ತೆಂಕಪೇಟೆ ಸೇರಿ ಹಲವು ಪ್ರದೇಶಗಳಲ್ಲಿ ನೆರೆ ಕಂಡು ಬಂದಿದ್ದು ನೂರಾರು ಮನೆಗಳು ಜಲಾವೃತವಾಗಿವೆ. ಬೆಳಗಿನ ಜಾವ ನೀರಿನ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಕೂಡಲೇ ಮಾಹಿತಿ ತಿಳಿದ ಅಗ್ನಿಶಾಮಕ ದಳ ಹಾಗೂ ಉಡುಪಿ ನಗರಸಭೆ ಕಾರ್ಯಪಡೆ ಸ್ಥಳಕ್ಕೆ ಆಗಮಿಸಿ ಬೋಟಿನ ಮೂಲಕ ಹಾಗೂ ಹಗ್ಗದ ಸಹಾಯದಿಂದ ಮನೆ ಮಂದಿಯನ್ನು ರಕ್ಷಿಸುವ ಕಾರ್ಯ ನಡೆಸಿದ್ದಾರೆ. ಇವರೊಂದಿಗೆ ಸ್ಥಳೀಯರು ಕೂಡ ಕೈಜೋಡಿಸಿದ್ದಾರೆ ಎಂದು ತಿಳಿದು ಬಂದಿದೆ.

ನೆರೆಪೀಡಿತ ಪ್ರದೇಶಗಳಿಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್, ಎಸ್ ಪಿ ಅಕ್ಷಯ್ ಹಾಕೇ ಮಚ್ಚಿಂದ್ರ, ನಗರಸಭೆ ಪೌರಾಯುಕ್ತ ಆರ್ ಪಿ ನಾಯಕ್ ಸೇರಿದಂತೆ ಹಲವು ಅಧಿಕಾರಿಗಳು ತೆರಳಿ ರಕ್ಷಣಾ ಕಾರ್ಯದಲ್ಲಿ ಮಾರ್ಗದರ್ಶನ ನೀಡುತ್ತಿದ್ದಾರೆ.

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News