×
Ad

ಸಾಗರ: ಬಸ್ಸು- ಕಾರು ಢಿಕ್ಕಿ; ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Update: 2023-07-15 11:22 IST

ಸಾಗರ : ಬಸ್ಸು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಆನಂದಪುರ ಸಮೀಪದ ಐಗಿನ ಬೈಲು ತಿರುವಿನಲ್ಲಿ ಶನಿವಾರ ನಡೆದಿರುವ ಬಗ್ಗೆ ವರದಿಯಾಗಿದೆ.

ಸಾಗರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಜೆ ಆರ್ ಬಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಶಿವಮೊಗ್ಗದಿಂದ ಸಿಗಂದೂರಿಗೆ ದೇವಿಯ ದರ್ಶನಕ್ಕೆ ಹೊರಟಿದ್ದ ನ್ಯಾಯಾಧೀಶರ ಕಾರಿಗೆ ಢಿಕ್ಕಿ ಹೊಡೆದು,ನ್ಯಾಯಾಧೀಶರ ಕಾರು ಹಿಂಭಾಗದಲ್ಲಿ ಬರುತ್ತಿದ್ದ ಇನ್ನೊಂದು ಕಾರಿಗೆ ಢಿಕ್ಕಿ ಹೊಡೆದಿದೆ ತಿಳಿದು ಬಂದಿದೆ.

ಸ್ಥಳಕ್ಕೆ ಆನಂದಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News