×
Ad

ಸಾಗರ: ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಬಸ್ ಸಂಪೂರ್ಣ ಹಾನಿ

Update: 2023-07-17 16:03 IST

ಸಾಗರ: ತಾಲ್ಲೂಕಿನ ಆನಂದಪುರಂ ರೈಲ್ವೆ ಗೇಟ್ ಹತ್ತಿರ ಕಳೆದ ಎರಡು ದಿನಗಳಿಂದ ಕೆಟ್ಟು ನಿಂತಿದ್ದ ಗಜಾನನ ಸಾರಿಗೆ ಬಸ್ನಲ್ಲಿ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಸೋಮವಾರ ನಡೆದಿರುವ ಬಗ್ಗೆ ವರದಿಯಾಗಿದೆ.

ಎರಡು ದಿನಗಳ ಹಿಂದೆ ಬಸ್ ಹಾಳಾಗಿದ್ದರಿಂದ ರೈಲ್ವೆ ಗೇಟ್ ಸಮೀಪ ನಿಲ್ಲಿಸಲಾಗಿತ್ತು. ಸೋಮವಾರ ಬೆಳಿಗ್ಗೆ ಚಾಲಕ ಮತ್ತು ನಿರ್ವಾಹಕ ಕೆಳಗೆ ಇಳಿದು ಹೋಗಿದ್ದಾಗ ಈ ಘಟನೆ ಸಂಭವಿಸಿದೆ. ಆಕಸ್ಮಿಕ ಬೆಂಕಿ ತಗುಲಿದ್ದರಿಂದ ಬಸ್ ಶೇ. 75ರಷ್ಟು ಸುಟ್ಟು ಹೋಗಿದೆ. ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಆನಂದಪುರಂ ಠಾಣೆಯಲ್ಲಿ ದೂರು ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News