×
Ad

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಆರೋಪ: ತಮಿಳುನಾಡು ಬಿಜೆಪಿ ನಾಯಕನ ಬಂಧನ

Update: 2023-06-17 13:29 IST

ಎಸ್.ಜಿ. ಸೂರ್ಯ 

ಚೆನ್ನೈ: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದ ಮೇಲೆ ತಮಿಳುನಾಡಿನ ಬಿಜೆಪಿ ಮುಖಂಡರೊಬ್ಬರನ್ನು ಶುಕ್ರವಾರ ಬಂಧಿಸಲಾಗಿದೆ.

ಮಧುರೈನಲ್ಲಿ ಪೌರ ಕಾರ್ಮಿಕನ ಸಾವು ಎಂದು ಆರೋಪಿಸಿ ಟ್ವೀಟ್ ಮಾಡಿದ್ದಕ್ಕಾಗಿ ತಮಿಳುನಾಡಿನಲ್ಲಿ ಪಕ್ಷದ ರಾಜ್ಯ ಕಾರ್ಯದರ್ಶಿ ಎಸ್.ಜಿ. ಸೂರ್ಯ ಅವರನ್ನು ಬಂಧಿಸಲಾಗಿದೆ. ಅದೇ ಟ್ವೀಟ್ನಲ್ಲಿ ಸೂರ್ಯ ಅವರು ಮಧುರೈ ಸಂಸದ ವೆಂಕಟೇಶನ್ ಅವರ ಮೌನಕ್ಕಾಗಿ ವಾಗ್ದಾಳಿ ನಡೆಸಿದ್ದರು.

ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಯನ್ನು ಮಧುರೈ ಜಿಲ್ಲಾ ಪೊಲೀಸರು ಅಲ್ಲಗಳೆದಿದ್ದಾರೆ.

ವಾಕ್ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಲು ರಾಜ್ಯ ಸರಕಾರ ಪೊಲೀಸರನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿ ತನ್ನ ನಾಯಕನ ಬಂಧನವನ್ನು ಬಿಜೆಪಿ ಖಂಡಿಸಿದೆ.

ಬಿಜೆಪಿ ತಮಿಳುನಾಡು ರಾಜ್ಯ ಕಾರ್ಯದರ್ಶಿ ಸೂರ್ಯ ಅವರ ಬಂಧನವು ಅತ್ಯಂತ ಖಂಡನೀಯ. ಡಿಎಂಕೆಯ ಮಿತ್ರಪಕ್ಷಗಳಾದ ಕಮ್ಯುನಿಸ್ಟರ ಅಸಹ್ಯ ದ್ವಂದ್ವ ನೀತಿಯನ್ನು ಬಯಲಿಗೆಳೆದಿರುವುದು ಅವರ ಏಕೈಕ ತಪ್ಪು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಟ್ವಿಟರ್ನಲ್ಲಿ ಹೇಳಿದ್ದಾರೆ.

ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಕೂಡ ಬಂಧನವನ್ನು ಖಂಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News