ದೇವೇಗೌಡರ ಸಮ್ಮುಖದಲ್ಲೇ ಕುಮಾರಸ್ವಾಮಿಗೆ ಧಿಕ್ಕಾರ ಕೂಗಿದ ಕಾಂಗ್ರೆಸ್ ಕಾರ್ಯಕರ್ತೆಯರು

Update: 2024-04-16 05:54 GMT

ತುಮಕೂರು: ಎನ್‌ಡಿಎ ಅಭ್ಯರ್ಥಿ ವಿ. ಸೋಮಣ್ಣನವರ ಪರವಾಗಿ ತುಮಕೂರಿನ ಕುಂಚಿಟಿಗರ ಸಮುದಾಯ ಭವನದಲ್ಲಿ ನಡೆಯುತ್ತಿದ್ದ ಕಾರ್ಯಕರ್ತರ ಪ್ರಚಾರ ಸಭೆಯಲ್ಲಿ ದೇವೇಗೌಡರ ಸಮ್ಮುಖದಲ್ಲೇ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಎಚ್.ಡಿ. ಕುಮಾರಸ್ವಾಮಿ ಅವರಿಗೆ ದಿಕ್ಕಾರ ಕೂಗಿದ ಘಟನೆ ನಡೆಯಿತು.

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಕಾಂಗ್ರೆಸಿನ ಐದು ಗ್ಯಾರಂಟಿಗಳಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎಂಬ ಹೇಳಿಕೆ ವಿರುದ್ಧ ಇಂದು ತುಮಕೂರಿನಲ್ಲಿ ಪತ್ರಿಕಾಗೋಷ್ಠಿ ಮತ್ತು ಪ್ರತಿಭಟನೆ ನಡೆಸಿದ ನಂತರ ಪ್ರಧಾನಿ ಎಚ್ ಡಿ ದೇವೇಗೌಡರು NDA ಅಭ್ಯರ್ಥಿ ವಿ ಸೋಮಣ್ಣನವರ ಪರ ಪ್ರಚಾರ ನಡೆಸುತ್ತಿದ್ದ ಸಭೆಗೆ ನುಗ್ಗಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ದಿಕ್ಕಾರ ಕೂಗಿದರು.

ಕುಮಾರಸ್ವಾಮಿಯವರ ಪರವಾಗಿ ದೇವೇಗೌಡರು ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದರು. ಬಳಿಕ ಬಿಜೆಪಿ ಮಹಿಳಾ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತೆಯರನ್ನು ಎಳೆದು ಹೊರದಬ್ಬಿದ ಘಟನೆ ನಡೆದಿದೆ.

ಇದರಿಂದ ಪ್ರಚಾರ ಸಭೆಯು ಕೆಲ ಸಮಯ ಗೊಂದಲದಲ್ಲಿ ಮುಳುಗಿತ್ತು.




 


Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News