×
Ad

ಇಂದ್ರಾಳಿ ರೈಲ್ವೆ ನಿಲ್ದಾಣಕ್ಕೆ ಸಿಟಿಬಸ್ ಸಂಚಾರ: ಡಿಸಿಗೆ ಮನವಿ

Update: 2025-08-13 19:26 IST

ಉಡುಪಿ, ಆ.13: ಉಡುಪಿ ರೈಲ್ವೆ ಯಾತ್ರಿ ಸಂಘದ ವತಿಯಿಂದ ಅಧ್ಯಕ್ಷ ಧೀರಜ್ ಶಾಂತಿ ನೇತೃತ್ವದಲ್ಲಿ ಸೋಮವಾರ ಮಣಿಪಾಲದ ರಜತಾದ್ರಿಯಲ್ಲಿ ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರನ್ನು ಭೇಟಿ ಮಾಡಿ ಅಭಿನಂದಿಸಲಾಯಿತು.

ಉಡುಪಿ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಸಿಟಿ ಬಸ್ ಸಂಚಾರ ವ್ಯವಸ್ಥೆಯನ್ನು ಆರಂಭಿಸುವ ಬಗ್ಗೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಸಂಘದ ಉಪಾಧ್ಯಕ್ಷ ಮಧುಸೂದನ್ ಹೇರೂರು, ಕಾರ್ಯದರ್ಶಿ ಮಂಜುನಾಥ್ ಮಣಿಪಾಲ, ಕೋಶಾಧಿಕಾರಿ ಅಜಿತ್ ಕುಮಾರ್ ಪೈ, ನಿರ್ದೇಶಕರುಗಳಾದ ಜಾನ್ ರೆಬೆಲ್ಲೊ, ಶ್ರೀನಿವಾಸ್ ಶೆಟ್ಟಿ ತೊನ್ಸೆ, ಪ್ಲಾಸಿಡ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News