×
Ad

ಕೋಟ: ದೋಣಿ ಮಗುಚಿ ಬಿದ್ದು ಓರ್ವ ಮೀನುಗಾರ ಮೃತ್ಯು

Update: 2025-08-22 17:40 IST

ಕೋಟ: ಮೀನುಗಾರಿಕೆ ತೆರಳಿದ್ದ ವೇಳೆ ಅಲೆಗಳ ರಭಸಕ್ಕೆ ದೋಣಿ ಮಗುಚಿ ಬಿದ್ದ ಪರಿಣಾಮ ಓರ್ವ ಮೀನುಗಾರ ಮೃತಪಟ್ಟು, ಇಬ್ಬರು ಪ್ರಾಣಪಾಯದಿಂದ ಪಾರಾದ ಘಟನೆ ಸಾಸ್ತಾನದ ಕೋಡಿತಲೆ ಸೀತಾನದಿ ಹೊಳೆಯ ಅಳಿವೆ ಪ್ರದೇಶದಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.

ಮೃತಪಟ್ಟ ಮೀನುಗಾರ ಶರತ್ ಖಾರ್ವಿ (27) ಎಂದು ಗುರುತಿಸಲಾಗಿದೆ. ಶುಕ್ರವಾರ ಬೆಳಿಗ್ಗೆ ಅಕ್ಷಯ ಖಾರ್ವಿ, ಮಂಜುನಾಥ್ ಖಾರ್ವಿ ಹಾಗೂ ಶರತ್ ಖಾರ್ವಿ ಮೀನುಗಾರಿಕೆ ತೆರಳಿದ್ದರು. ಈ ಸಂದರ್ಭ ಅಳಿವೆ ಭಾಗದಲ್ಲಿ ಅಲೆಗಳ ರಭಸಕ್ಕೆ ದೋಣಿ ಮಗುಚಿ ಬಿದ್ದು ಮೂವರು ನೀರುಪಾಲಗಿದ್ದರು.ಅಕ್ಷಯ ಖಾರ್ವಿ ಹಾಗೂ ಮಂಜುನಾಥ್ ಖಾರ್ವಿಯವರು ಈಜಿ ದಡ ಸೇರಿದ್ದು ಶರತ್ ಖಾರ್ವಿ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ದೋಣಿ ಅವಘಡದಲ್ಲಿ ಪಾರಾಗಿದ್ದ ಮಂಜುನಾಥ್ ಖಾರ್ವಿ, ಅಕ್ಷಯ್ ಖಾರ್ವಿ ಇಬ್ಬರು ಮೀನುಗಾರರು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೋಣಿ ಸಮುದ್ರ ಪಾಲಾಗಿದ್ದು ಲಕ್ಷಾಂತರ ರೂ.ನಷ್ಟ ಸಂಭವಿಸಿದೆ ಎನ್ನಲಾಗಿದೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News