×
Ad

ಸ್ಕೌಟ್ಸ್‌ನಲ್ಲಿ ಯೋಗ, ಪ್ರಾಣಾಯಾಮ, ಧ್ಯಾನ ಸೇರಿಸಲು ಚಿಂತನೆ: ಪಿ.ಜಿ.ಆರ್.ಸಿಂದ್ಯಾ

Update: 2025-08-25 18:32 IST

ಉಡುಪಿ, ಆ.25: ಸ್ಕೌಟ್ಸ್ ಚಟುವಟಿಕೆಗಳಲ್ಲಿ ಯೋಗ, ಪ್ರಾಣಾಯಾಮ ಮತ್ತು ಧ್ಯಾನವನ್ನು ಸೇರ್ಪಡೆಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಇದರಿಂದ ಮಕ್ಕಳ ಜ್ಞಾಪನಾ ಸಾಮರ್ಥ್ಯವೂ ವೃದ್ಧಿಸಲಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಭಾರತ್ ಸೌಟ್ಸ್ ಮತ್ತು ಗೈಡ್ಸ್ ಇವುಗಳ ಸಂಯುಕ್ತಾಶ್ರಯದಲ್ಲಿ ಉಡುಪಿ ಜಿಲ್ಲೆಯ ಸರಕಾರಿ, ಅನುದಾನಿತ, ಅನುದಾನರಹಿತ ಪದವಿಪೂರ್ವ, ಪ್ರಥಮ ದರ್ಜೆ ಕಾಲೇಜುಗಳ ಉಪನ್ಯಾಸಕ- ಮತ್ತು ಉಪನ್ಯಾಸಕಿಯರಿಗೆ ಉಡುಪಿ ಬೋರ್ಡ್ ಹೈಸ್ಕೂಲಿನಲ್ಲಿ ಸೋಮವಾರ ಆಯೋಜಿಸಲಾದ ರೋವರಿಂಗ್ ಮತ್ತು ರೇಂಜರಿಂಗ್ ಪ್ರಾರಂಭಿಕ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ರೋವರ್ಸ್ ಮತ್ತು ರೇಂಜರ್ಸ್‌ಗಳಿಗೆ ಶಿಸ್ತು ಮತ್ತು ಸಮಯಪ್ರಜ್ಞೆ ಬಹಳ ಮುಖ್ಯ. ಇಲ್ಲದಿದ್ದರೆ ದೇಶದ ಪ್ರಗತಿ ಸಾಧ್ಯವಿಲ್ಲ. ಕಮ್ಯುನಿಷ್ಟ್ ರಾಷ್ಟ್ರಗಳಲ್ಲಿ ಜನರು ಶಿಸ್ತು ಮತ್ತು ಸಮಯಪ್ರಜ್ಞೆ ಅಳವಡಿಸಿಕೊಂಡಿದ್ದರಿಂದ ಆರ್ಥಿಕವಾಗಿ ಪ್ರಬಲರಾಗಿದ್ದಾರೆ ಎಂದು ಅವರು ತಿಳಿಸಿದರು.

ಉಡುಪಿ ಜಿಲ್ಲಾ ಮುಖ್ಯ ಆಯುಕ್ತ ಜಯಕರ ಶೆಟ್ಟಿ ಇಂದ್ರಾಳಿ, ರಾಜ್ಯ ಸಂಟನಾ ಆಯುಕ್ತ ಎಂ.ಪ್ರಭಾಕರ ಭಟ್, ಡಿಡಿಪಿಯು ಮಾರುತಿ, ಪಪೂ ಪ್ರಾಂಶುಪಾಲರ ಸಂಘದ ಜಿಲ್ಲಾಧ್ಯಕ್ಷ ವರ್ಗೀಸ್ ಪಿ., ಜಿಲ್ಲಾ ಸ್ಕೌಟ್ಸ್ ಆಯುಕ್ತ ಜನಾರ್ದನ ಕೊಡವೂರು, ಗೈಡ್ಸ್ ಆಯುಕ್ತೆ ಜ್ಯೋತಿ ಪೈ, ಖಜಾಂಚಿ ಹರಿಪ್ರಸಾದ್ ರೈ, ಶಿಬಿರ ನಾಯಕ ಗುರುಮೂರ್ತಿ, ಜಿಲ್ಲಾ ಕಾರ್ಯದರ್ಶಿ ಆನಂದ್ ಅಡಿಗ, ರಾಜ್ಯ ಸಂಘಟನಾ ಸಹ ಕಾರ್ಯದರ್ಶಿ ಸುಮನ್ ಶೇರ್ಖ, ಕಾಲೇಜು ಪ್ರಾಂಶುಪಾಲೆ ಲೀಲಾವತಿ ಮೊದಲಾದವರು ಉಪಸ್ಥಿತರಿದ್ದರು.

ಉದಯ ಭಾಸ್ಕರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಹರೀಶ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News