ಬೈಂದೂರು ಪ.ಪಂಚಾಯತ್: ವಾರ್ಡ್ವಾರು ಮೀಸಲಾತಿ ಪ್ರಕಟ
ಉಡುಪಿ: ಜಿಲ್ಲೆಯ ಬೈಂದೂರು ಪಟ್ಟಣ ಪಂಚಾಯತ್ಗೆ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ -11ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, 2011ರ ಜನಗಣತಿಯನ್ನಾಧರಿಸಿ, ವಾರ್ಡು ವಾರು ಮೀಸಲಾತಿಯನ್ನು ನಿಗದಿಪಡಿಸಿ, ಅಂತಿಮ ಅಧಿಸೂಚನೆಯನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದೆ.
ವಾರ್ಡುವಾರು ಮೀಸಲಾತಿ ವಿವರ:-
ತಾರಾಪತಿ - ಹಿಂದುಳಿದ ವರ್ಗ-ಎ (ಮಹಿಳೆ), ವಿರೂಪಾಕ್ಷಿ- ಸಾಮಾನ್ಯ, ಸೋಮೇಶ್ವರ - ಹಿಂದುಳಿದ ವರ್ಗ -ಬಿ (ಮಹಿಳೆ), ದೊಂಬೆ -ಸಾಮಾನ್ಯ, ಪಂಚಲಿಂಗೇಶ್ವರಿ- ಹಿಂದುಳಿದ ವರ್ಗ ಎ, ಆಲಂದೂರು -ತೂದಳ್ಳಿ - ಸಾಮಾನ್ಯ (ಮಹಿಳೆ), ಕಡ್ಕೆ-ಮದ್ದೋಡಿ- ಹಿಂದುಳಿದ ವರ್ಗ-ಬಿ, ಯೋಜನಾ ನಗರ -ಪರಿಶಿಷ್ಟ ಜಾತಿ, ಬಂಕೇಶ್ವರ- ಹಿಂದುಳಿದ ವರ್ಗ-ಎ (ಮಹಿಳೆ), ಬೈಂದೂರು ಪೇಟೆ- ಸಾಮಾನ್ಯ, ವೆಂಕಟ್ರಮಣ- ಸಾಮಾನ್ಯ, ಪಾಣ್ತಿಗರಡಿ - ಹಿಂದುಳಿದ ವರ್ಗ-ಎ, ಯಡ್ತರೆ- ಸಾಮಾನ್ಯ (ಮಹಿಳೆ), ಮಯ್ಯಾಡಿ ಕಳವಾಡಿ - ಹಿಂದುಳಿದ ವರ್ಗ-ಎ (ಮಹಿಳೆ), ಬಾಡಾ, ಬಿಯಾರ- ಸಾಮಾನ್ಯ, ಸೂರ್ಕುಂದ - ಹಿಂದುಳಿದ ವರ್ಗ ಎ, ಗಂಗನಾಡು - ಪರಿಶಿಷ್ಟ ಪಂಗಡ, ಚಂದಣ-ವಸ್ರೆ, ತಗ್ಗರ್ಸೆ ಪೇಟೆ ಹಾಗೂ ನೆಲ್ಯಾಡಿ ಕಾಡೋಡಿಗೆ- ಸಾಮಾನ್ಯ (ಮಹಿಳೆ).
ಈ ಮೀಸಲಾತಿ ಕುರಿತಂತೆ ಸಲಹೆ, ಸೂಚನೆ/ ಆಕ್ಷೇಪಣೆಗಳಿದ್ದಲ್ಲಿ ಪ್ರಕಟಣೆಯ ದಿನದಿಂದ 7 ದಿನಗಳ ಒಳಗೆ ಲಿಖಿತ ರೂಪದಲ್ಲಿ ಸಲ್ಲಿಸ ಬಹುದು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಗಳು ಕಚೇರಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.