ರೈಲು ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು
Update: 2025-10-06 21:34 IST
ಬೈಂದೂರು, ಅ.6: ಚಲಿಸುತ್ತಿದ್ದ ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಾಗೂರು ರೈಲ್ವೆ ಬ್ರಿಡ್ಜ್ ಸಮೀಪ ಅ.5ರಂದು ಸಂಜೆ ವೇಳೆ ನಡೆದಿದೆ.
ಮೃತರನ್ನು ಹೇರೂರು ಗ್ರಾಮದ ದಿವಾಕರ ಆಚಾರ್ಯ(56) ಎಂದು ಗುರುತಿಸಲಾಗಿದೆ. ಮರದ ಕೆಲಸ ಮಾಡಿ ಕೊಂಡಿದ್ದ ಇವರು, ರೈಲ್ವೆ ಹಳಿಯನ್ನು ದಾಟುವಾಗ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಹೋಗುವ ರೈಲು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.