×
Ad

ರೋಗಿಗಳಿಗಾಗಿ ಗಾಲಿ ಕುರ್ಚಿಗಳು - ವಾಕರ್ ವಿತರಣೆ

Update: 2025-10-19 19:51 IST

ಉಡುಪಿ, ಅ.19: ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಕತ್ವದಲ್ಲಿ ಉದ್ಯಾವರ ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಗೆ ರೋಗಿಗಳ ಅನುಕೂಲಕ್ಕಾಗಿ ಎರಡು ಗಾಲಿ ಕುರ್ಚಿಗಳು ಮತ್ತು ವಾಕರ್‌ಗಳನ್ನು ನೀಡಲಾಯಿತು.

ಆಸ್ಪತ್ರೆಯ ಉಪ ವೈದ್ಯಕೀಯ ಅಧೀಕ್ಷಕ ಡಾ.ದೀಪಕ್ ಎಸ್.ಎಂ. ಈ ಕೊಡುಗೆಗಳನ್ನು ಸ್ವೀಕರಿಸಿ ಸಂಸ್ಥೆಗೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಕೆ.ನಿಶಾಂತ್ ಪೈ, ಡಾ.ಸದಾ ನಂದ ಭಟ್, ರಮಾನಂದ ಕಾರಂತ್, ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ., ಪತ್ರಿಕಾ ಛಾಯಾಗ್ರಹ ಅಸ್ಟ್ರೋ ಮೋಹನ್, ಕಸಾಪ ಪದಾಧಿಕಾರಿಗಳಾದ ರಂಜನಿ ವಸಂತ್, ಸಿದ್ದ ಬಸಯ್ಯ ಸ್ವಾಮಿ ಚಿಕ್ಕಮಠ, ವಸಂತ್, ರಾಘವೇಂದ್ರ ಪ್ರಭು ಕರ್ವಾಲು, ಉದ್ಯಮಿ ಪ್ರಶಾಂತ್ ಕಾಮತ್ ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News