×
Ad

ಬೈಕ್‌ಗೆ ಅಡ್ಡ ಬಂದ ಚಿರತೆ; ಸವಾರನಿಗೆ ಗಂಭೀರ ಗಾಯ, ಚಿರತೆ ಸಾವು

Update: 2025-10-23 18:57 IST

ಬ್ರಹ್ಮಾವರ, ಅ.23: ಚಿರತೆಯೊಂದು ವೇಗವಾಗಿ ಚಲಿಸುತ್ತಿದ್ದ ಬೈಕ್‌ಗೆ ಅಡ್ಡ ಬಂದ ಪರಿಣಾಮ, ಸವಾರ ನಿಯಂತ್ರಣ ತಪ್ಪಿ ಚಿರತೆಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡರೆ, ಚಿರತೆ ಸ್ಥಳದಲ್ಲೇ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಪಂ ವ್ಯಾಪ್ತಿಯ ನಂಚಾರಿನಲ್ಲಿ ನಡೆದಿದೆ.

ಘಟನೆಯಿಂದ ಗಂಭೀರ ಗಾಯಗೊಂಡ ಬೈಕ್ ಸವಾರ ನಂಚಾರು ನಿವಾಸಿ ಭಾಸ್ಕರ್ ಶೆಟ್ಟಿ ಎಂದು ಗುರುತಿಸಲಾ ಗಿದೆ. ಭಾಸ್ಕರ್ ಶೆಟ್ಟಿ ರಾತ್ರಿ ತನ್ನ ಬೈಕ್ ನಲ್ಲಿ ಮನೆಗೆ ಬರುತ್ತಿದ್ದ ವೇಳೆ ಒಮ್ಮೆಲೇ ಚಿರತೆಯೊಂದು ಅಡ್ಡ ಬಂದ ಪರಿಣಾಮ ಸವಾರನ ನಿಯಂತ್ರಣ ತಪ್ಪಿ ಬೈಕ್ ಚಿರತೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಚಿರತೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೈಕ್ ಸವಾರನನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದಾರೆ. ಹೆಬ್ರಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಮೃತಪಟ್ಟ ಚಿರತೆಯನ್ನು ಪರಿಶೀಲಿಸಿದ್ದಾರೆ. ಘಟನೆಯ ಕುರಿತಂತೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News