ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರಕ್ಕೆ ಹಿರಿಯ ಸಾಹಿತಿಗಳ ಆಯ್ಕೆ
Update: 2025-11-03 17:07 IST
ಉಡುಪಿ, ನ.3: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ನೀಡುವ ಸಾಹಿತಿ ಮೇಟಿ ಮುದಿಯಪ್ಪ ನೆನಪಿನ ‘ಮಲಬಾರ್ ವಿಶ್ವ ಸಾಹಿತ್ಯ ಪುರಸ್ಕಾರ 2025ಕ್ಕೆ’ ರಾಜ್ಯದ ಮೂವರು ಹಿರಿಯ ಸಾಹಿತಿಗಳು ಆಯ್ಕೆಯಾಗಿದ್ದಾರೆ.
ಧಾರವಾಡದ ಚನ್ನಪ್ಪ ಅಂಗಡಿ (ಸಮಗ್ರ ಸಾಹಿತ್ಯ), ಉಡುಪಿಯ ಡಾ.ನಿಕೇತನ(ಸಂಶೋಧನೆ ವಿಮರ್ಶೆ), ಬೆಂಗಳೂರಿನ ಮುದಲ್ ವಿಜಯ್ (ಕಾವ್ಯ) ಅವರಿಗೆ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ನ.22ರಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮಿತಿಯ ಸಂಚಾಲಕಿ ಸಂಧ್ಯಾ ಶೆಣೈ ಉಡುಪಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.