ವಿಬಿ ಜಿ ರಾಮ್ ಜೀ ಯೋಜನೆ ಜಾಗೃತಿ ಸಮಾವೇಶ
Update: 2026-01-31 21:26 IST
ಉಡುಪಿ, ಜ.31: ಬಿಜೆಪಿ ಉಡುಪಿ ಜಿಲ್ಲೆ ವತಿಯಿಂದ ವಿಬಿ ಜಿ ರಾಮ್ ಜೀ ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್(ಗ್ರಾಮೀಣ) ಕಾಯ್ದೆ ಜಾಗೃತಿ ಸಮಾವೇಶವನ್ನು ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪದಲ್ಲಿ ಶನಿವಾರ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ರಾಜ್ಯ ಬಿಜೆಪಿ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ನವೀನ್ ಕುಮಾರ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ.ಸುವರ್ಣ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಹೆರ್ಗ ದಿನಕರ್ ಶೆಟ್ಟಿ, ರೇಷ್ಮಾ ಶೆಟ್ಟಿ, ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಕಮಲಾಕ್ಷ್ ಹೆಬ್ಬಾರ್ ಉಪಸ್ಥಿತರಿದ್ದರು.