×
Ad

ಅಗ್ನಿ ಅವಘಡ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಕ್ಕೆ ಉಡುಪಿ ನಗರಸಭೆ ಸೂಚನೆ

Update: 2026-05-08 21:21 IST

ಉಡುಪಿ, ಮೇ 8: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಬೆಂಕಿ ಅನಾಹುತಗಳು ಹೆಚ್ಚುತ್ತಿರುವುದಿಂದ ವಾಣಿಜ್ಯ ಮಳಿಗೆ ಗಳು, ವಸತಿ ಸಮುಚ್ಚಯಗಳು, ಆಸ್ಪತ್ರೆಗಳು, ಕೈಗಾರಿಕೆಗಳು, ಗುಜರಿ ಅಂಗಡಿಗಳಲ್ಲಿ ಅಗ್ನಿ ಅವಘಡಗಳನ್ನು ತಡೆಗಟ್ಟಲು ಅಗ್ನಿನಂದಕವನ್ನು ಅಳಡಿಸಿಕೊಳ್ಳಬೇಕು ಎಂದು ಉಡುಪಿ ನಗರಸಭೆ ಸೂಚಿಸಿದೆ.

ನಗರಸಭಾ ವ್ಯಾಪ್ತಿಯಲ್ಲಿ ವಾಣಿಜ್ಯ ಮಳಿಗೆಗಳು ಹಾಗೂ ವಸತಿ ಸಮುಚ್ಚಯಗಳಲ್ಲಿ ಬೆಂಕಿ ಅನಾಹುತಗಳು ದಿನನಿತ್ಯ ಹೆಚ್ಚು ಹೆಚ್ಚಾಗಿ ಕಂಡು ಬರುತ್ತಿದೆ. ಅದೇ ರೀತಿ ಪ್ರಸ್ತುತ ನಗರದಲ್ಲಿ ತಾಪಮಾನವು ದಿನೇದಿನೇ ಹೆಚ್ಚಾಗುತ್ತಿದೆ. ಆದುದರಿಂದ ಅಗ್ನಿನಂದಕವನ್ನು ಮತ್ತು ರಾಸಾಯನಿಕ ದ್ರವ್ಯಗಳು ಮತ್ತು ಇತರೆ ದ್ರವ್ಯ ಪ್ರದಾರ್ಥಗಳನ್ನು ಶೇಖರಣೆ ಮಾಡಿ ರುವಂತಹ ಗೋದಾಮುಗಳಲ್ಲಿ ಅಗ್ನಿ ಸುರಕ್ಷತೆಯ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಅಳಡಿಸಿಕೊಳ್ಳಬೇಕು.

ಅದೇ ರೀತಿ ತಮ್ಮ ತಮ್ಮ ಮಳಿಗೆಗಳಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗಳಿಗೆ ಅಗ್ನಿ ಸುರಕ್ಷತೆಯ ಬಗ್ಗೆ ತರಬೇತಿ ಯನ್ನು ನೀಡಿ ನಗರದಲ್ಲಿ ಅಗ್ನಿ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News