×
Ad

ಅನುಮಾನಾಸ್ಪದವಾಗಿ ತಿರುಗುತ್ತಿದ್ದ ದಂಪತಿ ಸೆರೆ

Update: 2026-05-22 22:16 IST

ಮಣಿಪಾಲ, ಮೇ 22: ಇಂದ್ರಾಳಿ ರೈಲ್ವೆ ಸ್ಟೇಷನ್ ಬಳಿ ಮೇ 21ರಂದು ಅನುಮಾನಾಸ್ಪದವಾಗಿ ನಿಂತಿದ್ದ ದಂಪತಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ರಮೇಶ ಬಂಡಿ ವಡ್ಡರ(45) ಹಾಗೂ ಆತನ ಪತ್ನಿ ಸುಧಾ(30) ಬಂಧಿತ ಆರೋಪಿಗಳು. ರಮೇಶ್ ಕೈಯಲ್ಲಿ ಎರಡು ಮೊಬೈಲ್ ಇದ್ದು ಅದರಲ್ಲಿ ಒಂದು ಸಿಮ್ ಹಾಗೂ ಸುಧಾ ಕೈಯಲ್ಲಿ ಒಂದು ಮೊಬೈಲ್ ಇತ್ತು. ಈ ಬಗ್ಗೆ ಸಮರ್ಪಕ ಉತ್ತರ ನೀಡದೆ ಇರುವುದರಿಂದ ಪೊಲೀಸರು ಅನುಮಾನ ಗೊಂಡು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News