ದಾಂತಿ ಸ್ಮಾರಕ ಸಾಹಿತ್ಯ ಪುರಸ್ಕಾರಕ್ಕೆ ‘ಸಖಿ ಸೂಸಿದ ಸೌಗಂಧ’ ಪುಸ್ತಕ ಆಯ್ಕೆ
Update: 2026-05-31 20:33 IST
ಉಡುಪಿ, ಮೇ 31: ಫ್ರಾನ್ಸಿಸ್ ದಾಂತಿ ಸ್ಮಾರಕ ಪ್ರತಿಷ್ಠಾನ ಮತ್ತು ಕಥೋಲಿಕ್ ಸಭಾ ಉಡುಪಿ ಪ್ರದೇಶ ಇವರ ಜಂಟಿ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮಟ್ಟದ ದಿ.ಫ್ರಾನ್ಸಿಸ್ ದಾಂತಿ ಸ್ಮಾರಕ ಸಾಹಿತ್ಯ ಪುರಸ್ಕಾರ-2025 ಕವಯತ್ರಿ ಫ್ಲಾವಿಯಾ ಅಲ್ಬುಕರ್ಕ್ ಪುತ್ತೂರು ಅವರ ಸಖಿ ಸೂಸಿದ ಸೌಗಂಧ ಕವನ ಸಂಕಲನಕ್ಕೆ ಲಭಿಸಿದೆ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನವರಾಗಿರುವ ಫ್ಲಾವಿಯಾ ಅಲ್ಬುಕರ್ಕ್ ಅವರು ಕನ್ನಡ ಸಾಹಿತ್ಯದಲ್ಲಿ ಅಭಿರುಚಿ ಹೊಂದಿದವರಾಗಿದ್ದಾರೆ. ಪ್ರಶಸ್ತಿಯು 25000ರೂ. ನಗದು, ಸ್ಮರಣಿಕೆಯನ್ನು ಹೊಂದಿದ್ದು ಜೂ.14ರಂದು ಬೆಳಿಗ್ಗೆ 10 ಗಂಟೆಗೆ ಶಿರ್ವ ಆರೋಗ್ಯ ಮಾತಾ ಚರ್ಚಿನ ಸಭಾಂಗಣದಲ್ಲಿ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ.ಡಾ.ಲೆಸ್ಲಿ ಕ್ಲಿಫರ್ಡ್ ಡಿಸೋಜ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ದಿ.ಫ್ರಾನ್ಸಿಸ್ ದಾಂತಿ ಸ್ಮಾರಕ ಪುರಸ್ಕಾರ ಸಮಿತಿಯ ಆಲ್ಫೋನ್ಸ್ ಡಿಕೋಸ್ತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.