×
Ad

ವೃತ್ತಿ ಪರಿಣತಿಗೆ ತರಬೇತಿ ಮುಖ್ಯ: ಅನುರಾಧ ಹಾದಿಮನಿ

Update: 2026-06-27 22:06 IST

ಉಡುಪಿ, ಜೂ.27: ಯಾವುದೇ ಸಂಸ್ಥೆಯಲ್ಲಿ ತರಬೇತಿಯು ಬಹುಮುಖ್ಯ ಅಂಶವಾಗಿದೆ. ಅದು ವೃತ್ತಿ ಬದುಕಿನಲ್ಲಿ ನಮ್ಮ ಪರಿಣತಿಯನ್ನು ಹೆಚ್ಚಿಸಲು ಸಹಕಾರಿಯಾಗಿದೆ. ಅದರಲ್ಲೂ ವಿಕಲಚೇತನರಿಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ತರಬೇತಿ ಅತಿ ಅಗತ್ಯ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಅನುರಾಧ ಬಿ ಹಾದಿಮನಿ ಹೇಳಿದ್ದಾರೆ.

ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಉಡುಪಿ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಉಡುಪಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ ಇವರ ಸಹಯೋಗದೊಂದಿಗೆ ನಡೆದ ಉಡುಪಿ, ಬ್ರಹ್ಮಾವರ, ಕಾಪು ತಾಲೂಕು ಮಟ್ಟದ ವಿಕಲಚೇತನರ ಪುನರ್ವಸತಿ ಕಾರ್ಯಕರ್ತರಿಗೆ ಒಂದು ದಿನದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ರತ್ನಾ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ರೆಡ್‌ಕ್ರಾಸ್ ಸಭಾಪತಿ ಡಾ.ಅಶೋಕ್ ಕುಮಾರ್ ವೈ.ಜಿ. ಭಾಗವಹಿಸಿದ್ದರು.

ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಜಯಶ್ರೀ ಸ್ವಾಗತಿಸಿ, ರೆಡ್‌ಕ್ರಾಸ್ ಕಾರ್ಯದರ್ಶಿ ಡಾ.ಗಣನಾಥ ಶೆಟ್ಟಿ ಎಕ್ಕಾರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಬಳಿಕ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯೋಜನಾ ಸಹಾಯಕ ಶಿವಾಜಿ, ನೋಡಲ್ ಅಧಿಕಾರಿ ಜಯಶ್ರೀ, ಫಿಸಿಯೋಥೆರಪಿಸ್ಟ್ ಡಾ.ಶ್ರೇಯಾ, ಮನಶಾಸ್ತ್ರಜ್ಞ ವೈಶಾಖ್ ವಾರಂಬಳ್ಳಿ, ವಾಕ್ ಮತ್ತು ಶ್ರವಣ ತಜ್ಞೆ ನೆಲಿಶಾ ಮೆರಿಲ್ ನಾಯ್ಕ್, ನಿವೃತ್ತ ಅಧಿಕಾರಿ ನಿರಂಜನ ಭಟ್, ಎ.ವಿ. ಬಾಳಿಗ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಕಾವ್ಯ ಟಿ., ವಿಕಲಚೇತನರ ಪುನರ್ವಸತಿ ಕೇಂದ್ರದ ಸದಸ್ಯ ಕಾರ್ಯದರ್ಶಿ ಡಾ.ಗಣನಾಥ ಶೆಟ್ಟಿ ಎಕ್ಕಾರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News