ಸಿಎಂ ವಿಡಿಯೊ ಸಂವಾದದಲ್ಲಿ ಭಾಗವಹಿಸಿದ ಉಡುಪಿ ಅಧಿಕಾರಿಗಳು

Update: 2026-08-11 21:51 IST

ಉಡುಪಿ, ಆ.11: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ನೇರ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಉಡುಪಿಯ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೇರಿದಂತೆ ಜಿಲ್ಲೆಯ ಎಲ್ಲಾ ಹಿರಿಯ, ಕಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಮಣಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಈ ವಿಡಿಯೋ ಸಂವಾದದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೋಲಿಸ್ ಅಧೀಕ್ಷಕ ಹರಿರಾಮ್ ಶಂಕರ್, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಇತರರು ಭಾಗವಹಿಸಿದ್ದರು.

ವಿಡಿಯೋ ಸಂವಾದದಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳ ಹಾಗೂ ಹೋಬಳಿ ಮಟ್ಟದಲ್ಲಿ ಅಧಿಕಾರಿಗಳು ಹಾಗೂ ನೌಕರರು ಪ್ರತ್ಯೇಕವಾಗಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಲಕ್ಷ್ಮಣ ಸವದಿ, ಸಂತೋಷ್ ಎಸ್. ಲಾಡ್, ಅಜಯ್ ಸಿಂಗ್, ವಿಜಯಾನಂದ ಕಾಶಪ್ಪನವರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ವಿವಿಧ ಇಲಾಖೆಗಳ ಕಾರ್ಯದರ್ಶಿಗಳು, ಸಚಿವಾಲಯದ ಹಿರಿಯ ಅಧಿಕಾರಿಗಳು, ಹಾಗೂ ಉನ್ನತಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News