ಖರ್ಗೆ ರ‍್ಯಾಲಿ ನಡೆಸಿದ ಸ್ಥಳ ಶುದ್ಧೀಕರಣ: ದಲಿತ ವಿರೋಧಿ ಮನಸ್ಥಿತಿಯ ಪ್ರತೀಕ: ಶುಭದರಾವ್

Update: 2026-08-14 17:27 IST

ಕಾರ್ಕಳ, ಆ.14: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಸಾರ್ವಜನಿಕ ರ‍್ಯಾಲಿಯನ್ನು ದ್ದೇಶಿಸಿ ಮಾತನಾಡಿದ ಬಳಿಕ, ಅದೇ ಸ್ಥಳದಲ್ಲಿ ಬಿಜೆಪಿ ಪರವಾದ ಸಂಘಟನೆಗಳಿಂದ ಪೂಜೆ ಹಾಗೂ ಹವನ ನಡೆಸಿ ಶುದ್ಧೀಕರಣ’ ಮಾಡಿರುವ ಘಟನೆ ತೀವ್ರ ಖಂಡನೀಯ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದರು ಎನ್ನುವ ಏಕೈಕ ಕಾರಣಕ್ಕೆ ಬಿಜೆಪಿ ಪರ ಸಂಘಟನೆಗಳು ಸ್ಥಳವನ್ನು ಶುದ್ಧೀಕರಣ’ ಮಾಡಿರುವುದು ಅಸ್ಪೃಶ್ಯತೆಯನ್ನು ಪೋಷಿಸುವಂತಿದೆ. ಜಾತಿ ಆಧಾರಿತ ಅಸ್ಪೃಶ್ಯತೆ ಮತ್ತು ತಾರತಮ್ಯವನ್ನು ಸಂವಿಧಾನವೇ ತಿರಸ್ಕರಿಸಿರುವ ಸಂದರ್ಭದಲ್ಲಿ ಇಂತಹ ಆಚರಣೆಗಳು ಅಮಾನವೀಯವಾಗಿದೆ.

ಬಿಜೆಪಿ ಮತ್ತು ಬಿಜೆಪಿ ಪರ ಸಂಘಟನೆಗಳು ನಿಜವಾಗಿಯೂ ಅಸ್ಪೃಶ್ಯತೆ ಹಾಗೂ ಜಾತಿ ತಾರತಮ್ಯವನ್ನು ವಿರೋಧಿಸುತ್ತಿದ್ದರೆ, ಇಂತಹ ಘಟನೆಗಳನ್ನು ಸ್ಪಷ್ಟವಾಗಿ ಖಂಡಿಸಬೇಕು. ಧರ್ಮದ ಹೆಸರಿನಲ್ಲಿ ಯಾರನ್ನೂ ಕೀಳಾಗಿ ಕಾಣುವುದು, ವ್ಯಕ್ತಿಯ ಜಾತಿಯ ಆಧಾರದಲ್ಲಿ ಪವಿತ್ರ ಅಪವಿತ್ರ ಎಂಬ ಭೇದ ಸೃಷ್ಟಿಸುವುದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಶುಭದ ರಾವ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News