ಜೀವನಶೈಲಿ ಬದಲಾವಣೆಯಿಂದ ಉತ್ತಮ ಆರೋಗ್ಯ: ಡಾ.ಜತ್ತನ್ನ

ಉಡುಪಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣೆ

Update: 2026-08-18 19:11 IST

ಉಡುಪಿ, ಆ.18: ಪತ್ರಕರ್ತರು ಸದಾ ಕಾಲ ಒತ್ತಡದಿಂದ ಕಾರ್ಯ ನಿರ್ವಹಿಸುತ್ತಿರುತ್ತಾರೆ. ಇದರಿಂದ ಅವರಿಗೆ ತಮ್ಮ ಆರೋಗ್ಯದ ಕಡೆ ಹೆಚ್ಚು ಗಮನ ಕೊಡಲು ಸಾಧ್ಯವಾಗುತ್ತಿಲ್ಲ. ಆಹಾರ ಪದ್ಧತಿ, ವ್ಯಾಯಮ ಕೂಡ ವ್ಯವಸ್ಥಿತವಾಗಿರದೆ ಸಾಕಷ್ಟು ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆ ಇರುತ್ತದೆ. ಆದುದರಿಂದ ಪತ್ರಕರ್ತರು ಇಂತಹ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ತಮ್ಮ ಆರೋಗ್ಯವನ್ನು ತಪಾಸಣೆ ಮಾಡುವುದು ಅತೀ ಅಗತ್ಯ ವಾಗಿದೆ ಎಂದು ಉಡುಪಿ ಲೋಂಬಾರ್ಡ್ ಮೆಮೋರಿಯಲ್(ಮಿಷನ್) ಆಸ್ಪತ್ರೆಯ ನಿರ್ದೇಶಕ ಡಾ.ಸುಶೀಲ್ ಜತ್ತನ್ನ ಹೇಳಿದ್ದಾರೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಅಮೃತ್ ಡಯಾಗ್ನಸ್ಟಿಕ್ ಸೆಂಟರ್‌ನ ಸಹಯೋಗದೊಂದಿಗೆ ಸಂಘದ ಸದಸ್ಯರಿಗೆ ಅಮೃತ್ ಡಯಾಗ್ನಸ್ಟಿಕ್ ಸೆಂಟರ್‌ನಲ್ಲಿ ಹಮ್ಮಿಕೊಳ್ಳಲಾದ ನಾಲ್ಕು ದಿನಗಳ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ನಾವು ಇಂದು ನಮ್ಮ ಜೀವನ ಶೈಲಿಯನ್ನು ಬದಲಾಯಿಸಿಕೊಳ್ಳಬೇಕು. ನಿಯಮಿತವಾಗಿ ಆಹಾರ ಸೇವನೆ, ವ್ಯಾಯಾಮಕ್ಕೆ ಆದ್ಯತೆ ನೀಡಬೇಕು. ಇದರಿಂದ ಡಯಾಬಿಟೀಸ್, ಬಿಪಿಯಂತಹ ಕಾಯಿಲೆಯಿಂದ ದೂರ ಇರ ಬಹುದಾಗಿದೆ. ಪತ್ರಕರ್ತರು ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನಕೊಡು ವುದರಿಂದ ಇನ್ನಷ್ಟು ಉತ್ಸಾಹದಿಂದ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು, ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಂಕಿತ್ ಶೆಟ್ಟಿ, ಜಿಲ್ಲಾ ಸಂಘದ ಕೋಶಾಧಿಕಾರಿ ಹರೀಶ್ ಕುಂದರ್ ಮೊದಲಾದವರು ಉಪಸ್ಥಿತರಿದ್ದರು. ಅಮೃತ್ ಡಯಾಗ್ನಸ್ಟಿಕ್ ಸೆಂಟರ್‌ನ ಮುಖ್ಯಸ್ಥ ಸತೀಶ್ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ವಂದಿಸಿದರು. ಕಾಪು ತಾಲೂಕು ಪ್ರಧಾನ ಕಾರ್ಯದರ್ಶಿ ಪುಂಡಲೀಕ ಮರಾಠೆ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News