ಬೋಟಿನಲ್ಲಿ ಬಿದ್ದು ಗಾಯಗೊಂಡಿದ್ದ ಯುವಕ ಮೃತ್ಯು
ಮಲ್ಪೆ, ಆ.30: ಮಲ್ಪೆಯ ಜಗನ್ನಾಥ ಕುಮಾರ್ ಎಂಬವರ ಮಾಲಕತ್ವದ ಸೌಜನ್ಯ ಸಾಗರ ಹೆಸರಿನ ಮೀನುಗಾರಿಕಾ ಬೋಟಿನಲ್ಲಿ ಕೆಲಸ ಮಾಡಿಕೊಂಡಿದ್ದ ವೇಳೆ ಆ.24ರಂದು ಬೆಳಗಿನ ಜಾವ ಗಾಳಿ ಜೋರಾಗಿ ಬೀಸಿದ ಕಾರಣ ಬೋಟಿ ನೊಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಒಡಿಸ್ಸಾ ರಾಜ್ಯದ ಗಾಂಜಾಂ ಜಿಲ್ಲೆಯ ರಾಮಯ್ಯಪಟ್ಟಣಂ ನಿವಾಸಿ ಎಲ್. ಪುರುಷೋತ್ತಮ್ (37) ಚಿಕಿತ್ಸೆ ಫಲಕಾರಿಯಾಗದೇ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ನಿಧನರಾಗಿದ್ದಾರೆ.
ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.