ಮೇ 1-2ರಂದು ರಾಜ್ಯಮಟ್ಟದ ‘ಸಾವಿಷ್ಕಾರ್’ ಸ್ಪರ್ಧೆ
Update: 2024-04-29 12:33 GMT
ಕುಂದಾಪುರ, ಎ.29: ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜು ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯಮಟ್ಟದ ಸಾಂಸ್ಕೃತಿಕ, ತಾಂತ್ರಿಕ ಮತ್ತು ಮ್ಯಾನೇಜ್ಮೆಂಟ್ ಸ್ಪರ್ಧಾಕೂಟ ಸಾವಿಷ್ಕಾರ್ ಮೇ 1 ಮತ್ತು 2 ರಂದು ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ 20ಕ್ಕೂ ಅಧಿಕ ಸ್ಪರ್ಧೆಗಳು ನಡೆಯಲಿದ್ದು ಸುಮಾರು 30 ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಕೌಶಲ್ಯತೆಯನ್ನು ತೋರಿಸಲಿದ್ದಾರೆ. ಸ್ಪರ್ಧೆಯ ವಿಜೇತರಿಗೆ ನಗದು ಬಹುಮಾನದ ಜೊತೆಗೆ ಪ್ರಮಾಣಪತ್ರ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.