×
Ad

ಕಟಪಾಡಿ-ಶಿರ್ವ ರಸ್ತೆ ದುರಸ್ತಿಗೆ 13 ಕೋ. ಪ್ರಸ್ತಾವ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ

Update: 2024-10-26 19:49 IST

ಕಾಪು, ಅ.26: ಮಳೆ ಮತ್ತು ಪ್ರಾಕೃತಿಕ ವಿಕೋಪದಿಂದಾಗಿ ತೀವ್ರ ಹಾನಿ ಗೀಡಾಗಿರುವ ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿಯ ಮರು ನಿರ್ಮಾಣಕ್ಕಾಗಿ 13 ಕೋಟಿ ರೂ. ವೆಚ್ಚದ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ತಿಳಿಸಿದ್ದಾರೆ.

ಕೇಂದ್ರ ಸರಕಾರಕ್ಕೆ ಸಿಆರ್‌ಎಫ್ ನಿಧಿಯ 6 ಕೋಟಿ ರೂ. ಮತ್ತು ರಾಜ್ಯ ಸರಕಾರದ ಲೋಕೋಪಯೋಗಿ ಇಲಾಖೆಗೆ 7 ಕೋಟಿ ರೂ. ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿದೆ. ಮಳೆಯ ಕಾರಣಕ್ಕೆ ತೀರಾ ಹದಗೆಟ್ಟು ಹೋಗಿದ್ದ ರಸ್ತೆಯನ್ನು ನಾಲ್ಕೈದು ಬಾರಿ ರಿಪೇರಿ ಮಾಡಿಸಲಾಗಿತ್ತು.

ಕೇಂದ್ರ ಸರಕಾರದ ಸಿಆರ್‌ಎಫ್ ನಿಧಿಯಿಂದ 6 ಕೋಟಿ ರೂ. ಅನುದಾನ ಮಂಜೂರಾಗಿ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯ ಸರಕಾರದ ಲೋಕೋಪಯೋಗಿ ಇಲಾಖೆಯಿಂದ 7 ಕೋಟಿ ಅನುದಾನ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಿದ್ದು ಅನುಮೋದನೆ ಬಾಕಿ ಇದೆ. ಕೂಡಲೇ ರಸ್ತೆ ಮರು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News