×
Ad

ಮೇ 20ರಂದು ಉಚಿತ ಕಿವಿಯ ಶ್ರವಣ ತಪಾಸಣೆ ಶಿಬಿರ

Update: 2025-05-18 20:53 IST

ಕುಂದಾಪುರ, ಮೇ 18: ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನ ಕುಂಭಾಸಿ, ಕುಂದಾಪುರ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘ ಹಾಗೂ ಟೀಮ್ ಈಶ್ವರ ಮಲ್ಪೆಇವರ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣಾ ಕಾರ್ಯಕ್ರಮ ಮೇ 20ರಂದು ಕುಂಭಾಸಿ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನದ ವಠಾರದಲ್ಲಿ ಜರುಗಲಿದೆ.

ಶಿಬಿರಾರ್ಥಿಗಳು ತಮ್ಮ ಹೆಸರನ್ನು ನೋಂದಾಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು ಹಿರಿಯರಿಗೆ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ. ಶ್ರವಣ ಪರೀಕ್ಷೆಯ ಯಾವುದಾದರೂ ಹಳೆಯ ವರದಿ ಇದ್ದಲ್ಲಿ ಅದರ ಜೊತೆಯಲ್ಲಿ ತರಬೇಕು. ಹಾಗೂ ಮೆದಲು ನೋಂದಾಯಿಸಿದ 30 ಜನರಿಗೆ ಈ ಸೌಲಭ್ಯವನ್ನು ಬಳಸಿಕೊಳ್ಳಲು ಅವಕಾಶವಿರುತ್ತದೆ.

ಈಗಾಗಲೇ ಅಂತಾರಾಷ್ಟ್ರೀಯ ಸಂಸ್ಥೆಯಲ್ಲಿ ಅನುಭವ ಪಡೆದಿರುವ ವೈದ್ಯರ ತಂಡ ಈ ವಿಶೇಷ ಶಿಬಿರದಲ್ಲಿ ಪಾಲ್ಗೊಳುತ್ತಿದ್ದು ಈಶ್ವರ್ ಮಲ್ಪೆ ಟೀಮ್ ವತಿಯಿಂದ ಶೇ40 ಶ್ರವಣ ಸಾಧನದ ಮೊತ್ತವನ್ನು ಪಾವತಿಸಲಾ ಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಮೊಬೈಲ್ ನಂ 9902344399 ಅನ್ನು ಸಂಪರ್ಕಿಸಬಹುದು ಎಂದು ದೇವಳದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News