×
Ad

ಪಡಿತರ ಚೀಟಿ ವಿತರಣೆ: ಮಾ.4ಕ್ಕೆ ಶಿಬಿರದ ಆಯೋಜನೆ

Update: 2024-02-29 19:24 IST

ಉಡುಪಿ: ಕೇಂದ್ರ ಸರಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಕ್ರೋಢಿಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ್ ಪೋರ್ಟಲ್ ಮೂಲಕ ನೋಂದಾಯಿಸಲಾಗುತ್ತಿದೆ.

ಕಾರ್ಮಿಕ ಇಲಾಖೆ ಮತ್ತು ಆಹಾರ ಇಲಾಖೆಯ ವತಿಯಿಂದ ಇ-ಶ್ರಮ್ ಪೋರ್ಟಲ್‌ನಲ್ಲಿ ನೋಂದಣಿಯಾಗಿ ಪಡಿತರ ಚೀಟಿ ಹೊಂದಿರದ ಅಸಂಘಟಿತ ಕಾರ್ಮಿಕರಿಗೆ ಪಡಿತರ ಚೀಟಿಯನ್ನು ಒದಗಿಸುವ ಸಲುವಾಗಿ ಮಾರ್ಚ್ 4ರಂದು ಬೆಳಗ್ಗೆ 10ಗಂಟೆಗೆ ನಗರದ ಬನ್ನಂಜೆ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದಲ್ಲಿ ಶಿಬಿರವನ್ನು ನಡೆಸಲಿದ್ದು, ಅಗತ್ಯ ದಾಖಲೆಗಳಾದ ಇ-ಶ್ರಮ್, ಆಧಾರ್ ಕಾರ್ಡ್ ಹಾಗೂ ಆದಾಯ ಪ್ರಮಾಣ ಪತ್ರದೊಂದಿಗೆ ಆಗಮಿಸಿ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News