×
Ad

ಯಡ್ತಾಡಿ: ವಿದ್ಯಾಪೋಷಕ್‌ನ 68ನೇ ಮನೆ ಉದ್ಘಾಟನೆ

Update: 2025-04-23 21:24 IST

ಉಡುಪಿ, ಎ.23: ಯಕ್ಷಗಾನ ಕಲಾರಂಗ, ಬ್ರಹ್ಮಾವರ ತಾಲೂಕಿನ ಯಡ್ತಾಡಿಯ ವಿದ್ಯಾಪೋಷಕ್‌ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸುಶ್ಮಿತಾ ಳಿಗೆ 6 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿಕೊಟ್ಟ ಮನೆಯ ಉದ್ಘಾಟನೆ ಮಂಗಳವಾರ ನಡೆಯಿತು.

ಓಎನ್‌ಜಿಸಿಯ ನಿವೃತ್ತ ಸಿಜಿಎಂ ಬನ್ನಾಡಿ ನಾರಾಯಣ ಆಚಾರ್ ತಮ್ಮ ತಾಯಿಯವರಾದ ಬನ್ನಾಡಿ ಪದ್ದು ಆಚಾರ್ ಸ್ಮರಣಾರ್ಥ ಪ್ರಾಯೋಜಿಸಿದ ‘ಪದ್ಮಾಲಯ’ ಮನೆಯನ್ನು ಅವರೇ ಜ್ಯೋತಿ ಬೆಳಗಿಸಿ ಉದ್ಘಾಟಿ ಸಿದರು. ಬಾಲ್ಯದ ತನ್ನ ಕಷ್ಟದ ದಿನಗಳನ್ನು ಸ್ಮರಿಸಿಕೊಂಡು ತನ್ನ ತಾಯಿಯ ತ್ಯಾಗ ಮತ್ತು ತನಗೆ ವಿದ್ಯೆ ನೀಡಿದ ಗುರುಗಳ ಸಹಾಯ, ಮಾರ್ಗದರ್ಶನ ತನ್ನ ಸಾಧನೆಗೆ ಮೂಲ ಪ್ರೇರಣೆ ಎಂದರು.

ಕುಂದಾಪುರದ ಶಾಸಕ ಎ.ಕಿರಣ್‌ಕುಮಾರ್ ಕೊಡ್ಗಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಯಕ್ಷಗಾನ ಕಲಾರಂಗ ಸಮಾಜದ ಬಡ ವಿದ್ಯಾರ್ಥಿಗಳ ಕಷ್ಟಕ್ಕೆ ಶೀಘ್ರವಾಗಿ ಸ್ಪಂದಿಸುವ ಪರಿ ಅನನ್ಯ ಎಂದು ಅಭಿಪ್ರಾಯ ಪಟ್ಟರು.

ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ. ಜಗದೀಶ ನಾವುಡ ಮಾತನಾಡಿ ತಮ್ಮ ಸಂಸ್ಥೆಯಲ್ಲಿ ಸುಶ್ಮಿತಾಳಿಗೆ ಯಾವುದೇ ಆರ್ಥಿಕ ಹೊರೆ ಬೀಳದಂತೆ ಶಿಕ್ಷಣ ನೀಡಲಾಗುವುದು ಎಂದರು.

ಈ ಸಂದರ್ಭ ವಡ್ಡರ್ಸೆ ಮಹಾಲಿಂಗೇಶ್ವರ ದೇವಸ್ಥಾನದ ಮುಕ್ತೇಸರ ರಾದ ಕೆ.ಉದಯಕುಮಾರ್ ಶೆಟ್ಟಿ, ಕರ್ನಾಟಕ ಬ್ಯಾಂಕಿನ ನಿವೃತ್ತ ಮ್ಯಾನೇಜರ್ ಕೆ. ಚಂದ್ರಶೇಖರ ನಾವುಡ, ಬನ್ನಾಡಿ ಅವರ ಸಹೋದರ ರಾದ ನರಸಿಂಹ ಆಚಾರ್, ಸೀತಾರಾಮ್ ಆಚಾರ್, ಬೇಳೂರು ರಾಘವ ಶೆಟ್ಟಿ, ಬನ್ನಾಡಿ ಕಿರಣ್ ಆಚಾರ್ ಉಪಸ್ಥಿತರಿದ್ದರು.

ಯಕ್ಷಗಾನ ಕಲಾರಂಗದ ಎಸ್.ವಿ.ಭಟ್, ಕೆ.ಸದಾಶಿವ ರಾವ್, ಯು. ವಿಶ್ವನಾಥ ಶೆಣೈ, ಯು.ಎಸ್. ರಾಜ ಗೋಪಾಲ ಆಚಾರ್ಯ, ಭುವನಪ್ರಸಾದ ಹೆಗ್ಡೆ, ವಿಜಯ ಕುಮಾರ ಮುದ್ರಾಡಿ, ಅನಂತರಾಜ ಉಪಾಧ್ಯಾಯ, ರಾಜೇಶ್ ನಾವುಡ, ಎಚ್.ಎನ್. ವೆಂಕಟೇಶ್, ಕೆ.ಅಜಿತ್ ಕುಮಾರ್, ನಿರಂಜನ್ ಭಟ್, ಗಣಪತಿ ಭಟ್ ಹಾಗೂ ಕಿಶೋರ್ ಭಾಗವಹಿಸಿದ್ದರು.

ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ನಾರಾಯಣ ಎಂ. ಹೆಗಡೆ ವಂದಿಸಿದರೆ, ಪ್ರಾಸ್ತಾವಿಕ ಮಾತುಗಳೊಂದಿಗೆ ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News