×
Ad

ಮಾ.13ಕ್ಕೆ ಎಚ್.ಪಿ.ವಿ. ಲಸಿಕಾ ಅಭಿಯಾನಕ್ಕೆ ಚಾಲನೆ: ಉಡುಪಿ ಜಿಲ್ಲಾಧಿಕಾರಿ

Update: 2026-03-07 21:32 IST

ಉಡುಪಿ, ಮಾ.7: ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರನ್ನು ತಡೆಗಟ್ಟಲು 14 ವರ್ಷ ಪೂರ್ಣಗೊಂಡ ಹೆಣ್ಣು ಮಕ್ಕಳಿಗೆ ರಾಷ್ಟ್ರೀಯ ಎಚ್‌ಪಿವಿ ಲಸಿಕಾ ಅಭಿಯಾನ (ವ್ಯಾಕ್ಸಿನೇಶನ್ ಕ್ಯಾಂಪೇನ್) ಕಾರ್ಯಕ್ರಮವನ್ನು ಆರಂಭಿಸಿದ್ದು, ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಸಭಾಂಗಣ ದಲ್ಲಿ ನಡೆದ ಎಚ್‌ಪಿವಿ ಚುಚ್ಚುಮದ್ದು ಲಸಿಕಾ ಕಾರ್ಯಕ್ರಮದ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಈ ಲಸಿಕೆ ಗರ್ಭಕಂಠದ ಕ್ಯಾನ್ಸರ್‌ನಿಂದ ಹೆಣ್ಣುಮಕ್ಕಳಿಗೆ ರಕ್ಷಣೆ ನೀಡಲಿದೆ ಎಂದು ಅವರು ಹೇಳಿದರು.

14 ವಷರ್ ಪೂರ್ಣಗೊಂಡ ಆದರೆ 15 ವಷರ್ದೊಳಗಿನ ಹೆಣ್ಣು ಮಕ್ಕಳಿಗೆ ಈ ಲಸಿಕೆಯನ್ನು ಉಚಿತವಾಗಿ ನೀಡಲಾ ಗುವುದು. ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಬಹುದಾದ ರೋಗವಾಗಿದ್ದು, ಎಚ್‌ಪಿವಿ ಚುಚ್ಚುಮದ್ದು ಪಡೆದು ಕೊಳ್ಳುವು ದರಿಂದ ಮಹಿಳೆಯರಲ್ಲಿ ಈ ಕ್ಯಾನ್ಸರ್‌ನ್ನು ತಡೆಗಟ್ಟಬಹುದು ಎಂದರು.

ಜಿಲ್ಲೆಯಲ್ಲಿ 11,274 ಮಕ್ಕಳಿಗೆ ಈ ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿದೆ. ಲಸಿಕೆಯ 0.5ಎಂಎಲ್‌ನ ಒಂದು ಡೋಸ್‌ನ್ನು ನೀಡಲಾ ಗುತ್ತದೆ. ಇದು ಸ್ವಯಂ ಪ್ರೇರಿತವಾಗಿದ್ದು, ಪೋಷಕರು ಅಥವಾ ಪಾಲಕರ ಒಪ್ಪಿಗೆ ಕಡ್ಡಾಯ ವಾಗಿದೆ. ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಹಾಗೂ ತಾಯಿ- ಮಕ್ಕಳ ಆಸ್ಪತ್ರೆಯಲ್ಲಿ ಮೂರು ತಿಂಗಳ ಕಾಲ ಲಸಿಕೆ ನೀಡಲಾಗುವುದು ಎಂದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಮಾ.13ರಂದು ಬೆಳಗ್ಗೆ ಉಡುಪಿ ಬೋರ್ಡ್ ಹೈಸ್ಕೂಲ್‌ನಲ್ಲಿ ವಿದ್ಯಾರ್ಥಿನಿಯರಿಗೆ ಲಸಿಕೆ ನೀಡುವ ಮೂಲಕ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಲಾಗುವುದು. ಈ ಲಸಿಕೆ ಶೇ.93ರಷ್ಟು ಪರಿಣಾಮಕಾರಿಯಾಗಿದ್ದು ಇದರ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕು ಎಂದು ಅವರು ಮನವಿ ಮಾಡಿದರು.

ಎಚ್‌ಪಿವಿ ಲಸಿಕಾ ಅಭಿಯಾನಕ್ಕೆ ಫೆ.28ರಂದೇ ರಾಷ್ಟ್ರಮಟ್ಟದಲ್ಲಿ ಚಾಲನೆ ನೀಡಲಾಗಿದೆ.ಮುಂದಿನ ಮೂರು ತಿಂಗಳ ಅವಧಿಯಲ್ಲಿ ಆಯುಷ್ಮಾನ್ ಆರೋಗ್ಯ ಮಂದಿರ ಸೇರಿದಂತೆ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯಲು ಅವಕಾಶವಿದೆ ಎಂದರು.

ಮೊದಲ ಹಂತದಲ್ಲಿ 14 ವರ್ಷ ಮೇಲ್ಪಟ್ಟು, 15ವರ್ಷದೊಳಗಿನ ಹೆಣ್ಣು ಮಕ್ಕಳು ಲಸಿಕೆ ಪಡೆಯಲು ಅರ್ಹರಿದ್ದು, ಮುಂದಿನ ಹಂತದಲ್ಲಿ ವಯಸ್ಸಿನ ಪರಿಷ್ಕರಣೆ ನಡೆಯಲಿದೆ.

ಎಚ್‌ಪಿವಿ ವೈರಸ್‌ನಿಂದ ಬರಬಹುದಾದ ಗರ್ಭಕಂಠ ಕ್ಯಾನ್ಸರ್‌ನ್ನು ಈ ಲಸಿಕೆಯಿಂದ ನಿಯಂತ್ರಿಸಬಹುದಾಗಿದ್ದು, ಮಧ್ಯ ವಯಸ್ಸಿನ ಮಹಿಳೆಯರಿಗೆ ಆರೋಗ್ಯ ತಪಾಸಣಾಗಳನ್ನು ಮುಂದಿನ ದಿನಗಳಲ್ಲಿ ಆಯೋಜಿಸಲಾಗುತ್ತದೆ. ಇದರ ಪ್ರಯೋಜನವನ್ನು ಎಲ್ಲಾ ಹೆಣ್ಣುಮಕ್ಕಳು ಪಡೆಯಬೇಕು ಎಂದು ಕೋಟ ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್, ಕಾದ್ರೋಳ್ಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಬಸವರಾಜ್ ಜಿ ಹುಬ್ಬಳ್ಳಿ, ಜಿಲ್ಲಾ ಸರ್ಜನ್ ಡಾ.ಅಶೋಕ್, ಆರ್.ಸಿ.ಎಚ್ ಅಧಿಕಾರಿ ಜ್ಯೋತ್ಸ್ನಾ ಬಿ.ಕೆ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News