×
Ad

ಮಾ.15ರಂದು ವಿಶ್ವ ಗ್ರಾಹಕರ ದಿನಾಚರಣೆ

Update: 2025-03-14 21:04 IST

ಉಡುಪಿ, ಮಾ.14: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ, ಬಳಕೆದಾರರ ವೇದಿಕೆ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಮಾರ್ಚ್ 15ರಂದು ಬೆಳಗ್ಗೆ 10 ಗಂಟೆಗೆ ನಗರದ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ಉಪೇಂದ್ರ ಮಂಟಪದಲ್ಲಿ ನಡೆಯಲಿದೆ.

ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಗ್ರಾಹಕರ ದಿನಾಚರಣೆಯನ್ನು ಉದ್ಘಾಟಿಸಲಿದ್ದು, ಉಪೇಂದ್ರ ಪೈ ಸ್ಮಾರಕ ಕಾಲೇಜಿನ ಪ್ರಾಂಶುಪಾಲೆ ಆಶಾ ಕುಮಾರಿ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಅಂಬಲಪಾಡಿ ಶ್ರೀಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ಎನ್.ವಿಜಯ ಬಲ್ಲಾಳ್, ಜಿಪಂನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್, ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆಯ ಜಿಲ್ಲಾ ಅಧ್ಯಕ್ಷ ಸುನೀಲ ತಿ.ಮಾಸರೆಡ್ಡಿ, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಸಭೆ ಪೌರಾಯುಕ್ತ ಉದಯ್‌ಕುಮಾರ್ ಶೆಟ್ಟಿ, ನಗರಸಭಾ ಸದಸ್ಯೆ ಗೀತಾ ಶೇಟ್, ಬಳಕೆದಾರರ ವೇದಿಕೆಯ ವಿಶ್ವಸ್ಥ ಹರಿಕೃಷ್ಣ ಶಿವತ್ತಾಯ ಮತ್ತಿತರರು ಭಾಗವಹಿಸಲಿದ್ದಾರೆ.

ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಬಳಕೆದಾರರ ವೇದಿಕೆಯ ವಿಶ್ವಸ್ಥ ಮತ್ತು ಸಂಚಾಲಕ ಯು.ಜಿ. ಕಾಮತ್ ಗ್ರಾಹಕ ಜಾಗೃತಿ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News