ಮಾ.4ರಂದು ಉಡುಪಿಯಲ್ಲಿ ಬೃಹತ್ ಉದ್ಯೋಗ ಮೇಳ
ಉಡುಪಿ, ಮಾ.1: ಬಿಲ್ಲಾಡಿಯ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ(ಐಟಿಐ) ಮತ್ತು ಉಡುಪಿ ನಗರ ಸಭೆಯ ಪ್ರಾಯೋಜಕತ್ವದಲ್ಲಿ ಧರ್ಮಸ್ಥಳ ಶ್ರೀರಾಮಕ್ಷೇತ್ರ ಉಡುಪಿ ಸಮಿತಿ ಎಜ್ಯುಕೇಶನಲ್ ಟ್ರಸ್ಟ್ ಉಡುಪಿ ಹಾಗು ಬಿಲ್ಲವ ಸೇವಾ ಸಂಘ ಬನ್ನಂಜೆ ಇವುಗಳ ಸಹಕಾರದಲ್ಲಿ ಉದ್ಯೋಗ ಮೇಳವನ್ನು ಮಾ.4ರಂದು ಬನ್ನಂಜೆಯ ಬಿಲ್ಲವ ಸೇವಾ ಸಂಘದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಉಡುಪಿ ನಗರಸಭೆಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರಸಭಾ ಅಧ್ಯಕ್ಷ ಪ್ರಭಾಕರ್ ಪೂಜಾರಿ, ಬೆಳಗ್ಗೆ 9.30 ರಿಂದ 4.30 ರವರೆಗೆ ನಡೆಯುವ ಉದ್ಯೋಗ ಮೇಳದಲ್ಲಿ ಐಟಿಐ, ಡಿಪ್ಲೋಮಾ, ಡಿಗ್ರಿ, ಇಂಜಿನಿ ಯರಿಂಗ್ ಪದವಿಧರರು ಭಾಗವಹಿಸಬಹುದು ಎಂದರು.
ಈಗಾಗಲೇ 600ವಿದ್ಯಾರ್ಥಿಳು ನೋಂದಾವಣೆ ಮಾಡಿದ್ದು, ಸ್ಥಳದಲ್ಲಿ ನೋಂದಾವಣೆಗೂ ಅವಕಾಶ ಕಲ್ಪಿಸಲಾಗಿದೆ. ಸುಮಾರು 2000 ಮಂದಿ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ಇವೆ. ಅದೇ ರೀತಿ 56 ಕಂಪೆನಿಗಳು ಈಗಾಗಲೇ ಈ ಮೇಳದಲ್ಲಿ ಭಾಗವಹಿಸುವ ಬಗ್ಗೆ ನೋಂದಾಣಿ ಮಾಡಿವೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಹಾಗು ನೊಂದಣಿಗಾಗಿ 9739147397/ 6366298825 ಸಂಪರ್ಕಿಸಬಹುದು ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ನಗರಸಭಾ ಸದಸ್ಯರಾದ ವಿಜಯ್ ಕೊಡವೂರು, ಬಾಲಕೃಷ್ಣ ಶೆಟ್ಟಿ, ಧರ್ಮಸ್ಥಳ ಶ್ರೀರಾಮಕ್ಷೇತ್ರ ಉಡುಪಿ ಸಮಿತಿಯ ಎಜ್ಯುಕೇಶನ್ ಟ್ರಸ್ಟ್ನ ಕಾರ್ಯಾಧ್ಯಕ್ಷ ಓಬು ಪೂಜಾರಿ ಪಂದುಬೆಟ್ಟು, ಕಾರ್ಯದರ್ಶಿ ಭಾಸ್ಕರ್ ಸುವರ್ಣ, ಸಂಚಾಲಕ ಪ್ರಮೋದ್ ಕರ್ಕೇರ, ಪ್ರಾಂಶುಪಾಲ ರೂಪೇಶ್ ಕುಮಾರ್ ಉಪಸ್ಥಿತರಿದ್ದರು.