×
Ad

ಉಡುಪಿ ಜಿಲ್ಲಾಸ್ಪತ್ರೆಯ ಬಾತ್‌ರೂಮಿನಲ್ಲಿ ಬಿದ್ದು ರೋಗಿ ಮೃತ್ಯು: ಪ್ರಕರಣ ದಾಖಲು

Update: 2023-08-28 20:36 IST

ಉಡುಪಿ, ಆ.28: ಉಡುಪಿ ಜಿಲ್ಲಾಸ್ಪತ್ರೆಯ ರೋಗಿಯೊಬ್ಬರು ಬಾತ್‌ರೂಮಿ ನಲ್ಲಿ ಬಿದ್ದು ಗಾಯಗೊಂಡು ಮೃತಪಟ್ಟ ಘಟನೆ ಆ.26ರಂದು ಸಂಜೆ ವೇಳೆ ನಡೆದಿದೆ.

ಮೃತರನ್ನು ಭಟ್ಕಳದ ರಾಮ ತಿಮ್ಮಪ್ಪಗೊಂಡ ಎಂಬವರ ಮಗ ಸುರೇಶ ರಾಮಗೊಂಡ (36)ಎಂದು ಗುರುತಿಸಲಾಗಿದೆ. ಉಡುಪಿಯ ಎಸ್.ಎಸ್.ರೆಸಿಡೆನ್ಸ್ ಹೋಟೇಲ್‌ನಲ್ಲಿ ಅಡುಗೆ ಭಟ್ಟರಾಗಿ ಕೆಲಸ ಮಾಡಿ ಕೊಂಡಿದ್ದ ಇವರನ್ನು ಜ್ವರದಿಂದ ಬಳಲುತ್ತಿದ್ದ ಕಾರಣ ಆ.24ರಂದು ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಲ್ಲಿ ಚಿಕಿತ್ಸೆಯಲ್ಲಿರುವ ವೇಳೆ ಅವರು ಆಸ್ಪತ್ರೆಯ ಬಾತ್‌ರೂಮಿನಲ್ಲಿ ಬಿದ್ದ ರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News