×
Ad

ಹೊಳೆಗೆ ಬಿದ್ದು ವ್ಯಕ್ತಿ ಮೃತ್ಯು

Update: 2023-08-08 21:21 IST

ಕೊಲ್ಲೂರು, ಆ.8: ಹೊಳೆಯಲ್ಲಿ ಅಳವಡಿಸಿದ್ದ ಪಂಪ್‌ಸೆಟ್ ಮೇಲೆತ್ತಲು ಹೋದ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಚಿತ್ತೂರು ಗ್ರಾಮದ ಮುಟ್ಟೋಣ್ಕಿ ಎಂಬಲ್ಲಿ ಆ.7ರಂದು ಮಧ್ಯಾಹ್ನ ವೇಳೆ ನಡೆದಿದೆ.

ಮೃತರನ್ನು ಮುಟ್ಟೋಣ್ಕಿ ಪ್ರಭಾಕರ ಶೆಟ್ಟಿ(60) ಎಂದು ಗುರುತಿಸಲಾಗಿದೆ. ಇವರು ಕೃಷಿ ಕೆಲಸದ ಬಗ್ಗೆ ತೋಟದಲ್ಲಿ ಚಕ್ರನದಿಗೆ ಸೇರುವ ಹೊಳೆಸಾಲಿನಲ್ಲಿ ಅಳವಡಿಸಿರುವ ಪಂಪ್ ಸೆಟ್‌ನ್ನು ಮೇಲೆತ್ತಲು ಹೋಗಿದ್ದು, ಈ ವೇಳೆ ಆಕಸ್ಮಿಕವಾಗಿ ಹೊಳೆಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕೊಲ್ಲೂರು ಪೊಲೀಸ್‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News