×
Ad

ಬೈಂದೂರು: ರೈಲಿನಿಂದ ಬಿದ್ದು ಯುವಕ ಮೃತ್ಯು

Update: 2023-07-22 21:01 IST

ಸಾಂದರ್ಭಿಕ ಚಿತ್ರ 

ಬೈಂದೂರು: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಜು.21ರಂದು ನಸುಕಿನ ವೇಳೆ ಶಿರೂರು ಗ್ರಾಮದ ನಿರ್ಗದ್ದೆ ಎಂಬಲ್ಲಿ ನಡೆದಿದೆ.

ಮೃತರನ್ನು ಚಿಕ್ಕಮಗಳೂರು ಕೊಪ್ಪ ತಾಲೂಕಿನ ಸಂದೀಪ ಪೂಜಾರಿ(32) ಎಂದು ಗುರುತಿಸಲಾಗಿದೆ.

ಇವರು ರೈಲಿನಿಂದ ಆಕಸ್ಮಿಕವಾಗಿ ಬಿದ್ದು ಗಂಭೀರ ವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಮೃತದೇಹವು ಬೆಳಗ್ಗೆ 8ಗಂಟೆ ಸುಮಾರಿಗೆ ಪತ್ತೆಯಾಗಿದೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News