ಹಣದ ಬೇಡಿಕೆ ಆರೋಪ: ಕಾರ್ಕಳ ಡಿವೈಎಸ್ಪಿ ವಿಜಯ ಪ್ರಸಾದ್, ಇನ್ಸ್‌ಸ್ಪೆಕ್ಟರ್ ಸಹಿತ ಮೂವರ ಅಮಾನತು

Update: 2026-07-30 17:27 IST

ಉಡುಪಿ, ಜು.30: ಲಂಚದ ಹಣ ಸ್ವೀಕರಿಸುವ ವಿಡಿಯೋಗೆ ಸಂಬಂಧಿಸಿ ಕಾರ್ಕಳ ಡಿವೈಎಸ್ಪಿ, ವೃತ್ತ ನಿರೀಕ್ಷಕ ಹಾಗೂ ಸಿಬ್ಬಂದಿಯನ್ನು ಅಮಾನತು ಮಾಡಿರುವ ಬಗ್ಗೆ ವರದಿಯಾಗಿದೆ.

ಹಣದ ಬೇಡಿಕೆ ಇಟ್ಟಿರುವ ಕುರಿತ ವಿಡಿಯೊಗಳು ಮತ್ತು ಆರೋಪಗಳ ಆಧಾರದ ಮೇಲೆ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ್ ಪ್ರಾಥಮಿಕ ವಿಚಾರಣೆ ನಡೆಸಿದ್ದು, ಅದರ ಆಧಾರದ ಮೇಲೆ ಕಾರ್ಕಳ  ಡಿವೈಎಸ್ಪಿ ವಿಜಯ ಪ್ರಸಾದ್, ಕಾರ್ಕಳ ಪೊಲೀಸ್ ವೃತ್ತ ನಿರೀಕ್ಷಕ ಸಂದೀಪ್ ಹಾಗೂ ಡಿವೈಎಸ್ಪಿ ಕಚೇರಿ ಸಿಬ್ಬಂದಿ ಶಿವಾನಂದ ಅವರನ್ನು ಇಲಾಖಾ ಶಿಸ್ತು ಕ್ರಮ ಬಾಕಿ ಇರುವವರೆಗೆ ಅಮಾನತು ಗೊಳಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News